Latest

ನಗರಸಭಾ ಆಡಳಿತಕ್ಕೆ ಮುಖಭಂಗ, ಖಾಲಿ ಕುರ್ಚಿಗಳ ಪ್ರದರ್ಶನ

ನಂಜನಗೂಡು: ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ನಂಜನಗೂಡು ನಗರವೂ ಕೂಡ ಒಂದಾಗಿದ್ದು ಪುರಸಭೆಯಿಂದ ನಗರಸಭೆಯಾಗಿ ಬಡ್ತಿ ಪಡೆದು ಸುಮಾರು ವರ್ಷಗಳೇ ಕಳೆದಿವೆ .ಪ್ರತಿ ವರ್ಷದಂತೆ 2025 -26ನೇ ಸಾಲಿನ ಆಯ ವ್ಯಯ ಪೂರ್ವಭಾವಿ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ತಿಳಿಸಿ ಪರಿಹಾರ ಕಲ್ಪಿಸಿಕೊಡುವ ಯಾವೊಬ್ಬ ಸಾರ್ವಜನಿಕರು ಕೂಡ ಆಯವ್ಯಯ ಪೂರ್ವಭಾವಿ ಸಭೆಗೆ ಆಗಮಿಸದೆ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಆಡಳಿತಕ್ಕೆ ಮುಖಭಂಗವಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಅಧ್ಯಕ್ಷತೆಯಲ್ಲಿ
ಪೌರಾಯುಕ್ತರಾದ ವಿಜಯ್ ನೇತೃತ್ವದಲ್ಲಿ 2025 -26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಪ್ರತಿ ವರ್ಷ ನಡೆಯುವ ಸಭೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಪರ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆಗೆ ಆಗಮಿಸಿ ಬಜೆಟ್ ನಲ್ಲಿ ಹೊಸದಾಗಿ ಸೇರಿಸಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಮ್ಮ, ತಮ್ಮ ಸಲಹೆ ಸೂಚನೆಗಳು ಮತ್ತು ಅಭಿಪ್ರಾಯಗಳನ್ನು ನೀಡುವುದು ವಾಡಿಕೆಯಾಗಿತ್ತು .
ಆದರೆ ಈ ಬಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಪರಿಣಾಮ ಸರ್ಕಾರ ಹಣಕಾಸಿನ ದುಸ್ಥಿತಿಯನ್ನು ಎದುರಿಸುತ್ತಿದ್ದು ಯಾವ ಅಭಿವೃದ್ಧಿ ಕೆಲಸಗಳು ನಡೆಯುವುದಿಲ್ಲ ಎಂಬ ವಿಚಾರ ಅರಿತಿರುವ ಸಾರ್ವಜನಿಕರು ಮತ್ತು ಸಂಘಟಕರುಗಳು ಪೂರ್ವಭಾವಿ ಸಭೆಗೆ ಗೈರಾಗಿರಬಹುದು ಎನ್ನಲಾಗಿದೆ .ಈಗಾಗಲೇ ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಹಣಕಾಸಿನ ಕೊರತೆಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಮಾಹಿತಿಯನ್ನು ಅರಿತಿರುವ ನಂಜನಗೂಡಿನ ವಾಸಿಗಳು ಹಾಗೂ ಸಾರ್ವಜನಿಕರು ಪೂರ್ವಭಾವಿ ಸಭೆಗೆ ಹೋಗಿ ಸುಮ್ಮನೆ ಕಾಲಹರಣ ಮಾಡುವುದರ ಬದಲಾಗಿ ಸಭೆಗೆ ಹೋಗದಿರುವುದೇ ಮೇಲು ಎಂಬ ನಿರ್ಧಾರಕ್ಕೆ ಬಂದೋ ಅಥವಾ ನಗರ ಸಭೆಯವರ ಪ್ರಚಾರದ ಕೊರತೆಯಿಂದಲೋ ಸಾರ್ವಜನಿಕರು ಸಭೆಗೆ ಬಾರದೆ ಯಾವುದೇ ವಿಚಾರಗಳು ಸಭೆಯಲ್ಲಿ ಚರ್ಚೆಯಾಗದೆ ಕೇವಲ ಬೆರಳೆಣಿಕೆಯಷ್ಟು ಪತ್ರಕರ್ತರು, ಸಾರ್ವಜನಿಕರು ಹಾಗೂ ನಗರಸಭಾ ಸಿಬ್ಬಂದಿಗಳಿಗೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಹಾಗೂ ಪೌರಾಯುಕ್ತ ವಿಜಯ್ ನಂಜನಗೂಡು ನಗರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ ಉತ್ತಮ ಬಜೆಟ್ ನೀಡುವ ಆರಿಕೆ ಮಾತುಗಳನ್ನಾಡಿ ತರಾತುರಿಯಲ್ಲಿ ಆಯ ವ್ಯಯ ಸಭೆಯನ್ನು ಮುಕ್ತಾಯಗೊಳಿಸಿದ್ದಾರೆ
ಪೂರ್ವಾಬಾವಿ ಸಭೆಯಲ್ಲಿ ಸಾರ್ವಜನಿಕರ ಕೊರತೆಯಿಂದ ಎದ್ದು ಕಾಣುತ್ತಿದ್ದ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಸದಸ್ಯರು ಮೌನಕ್ಕೆ ಶರಣಾಗಿದ್ದರು ಎನ್ನುವಂತಿತ್ತು
ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಉಪಾಧ್ಯಕ್ಷರಾದ ರೆಹನಾ ಬಾನು, ನಗರ ಸಭಾ ಪೌರಾಯುಕ್ತರಾದ ವಿಜಯ್, ಸದಸ್ಯರುಗಳಾದ ಮಹದೇವ ಪ್ರಸಾದ್, ಗಾಯತ್ರಿ ಮೋಹನ್,ಸಿದ್ದಿಕ್ಅಹ್ಮದ್,ಮಹೇಶ್ ಅತ್ತಿಕಾನೆ ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು ವರದಿ: ಮೋಹನ್

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago