Latest

ನಗರಸಭಾ ಆಡಳಿತಕ್ಕೆ ಮುಖಭಂಗ, ಖಾಲಿ ಕುರ್ಚಿಗಳ ಪ್ರದರ್ಶನ

ನಂಜನಗೂಡು: ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ನಂಜನಗೂಡು ನಗರವೂ ಕೂಡ ಒಂದಾಗಿದ್ದು ಪುರಸಭೆಯಿಂದ ನಗರಸಭೆಯಾಗಿ ಬಡ್ತಿ ಪಡೆದು ಸುಮಾರು ವರ್ಷಗಳೇ ಕಳೆದಿವೆ .ಪ್ರತಿ ವರ್ಷದಂತೆ 2025 -26ನೇ ಸಾಲಿನ ಆಯ ವ್ಯಯ ಪೂರ್ವಭಾವಿ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ತಿಳಿಸಿ ಪರಿಹಾರ ಕಲ್ಪಿಸಿಕೊಡುವ ಯಾವೊಬ್ಬ ಸಾರ್ವಜನಿಕರು ಕೂಡ ಆಯವ್ಯಯ ಪೂರ್ವಭಾವಿ ಸಭೆಗೆ ಆಗಮಿಸದೆ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಆಡಳಿತಕ್ಕೆ ಮುಖಭಂಗವಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಅಧ್ಯಕ್ಷತೆಯಲ್ಲಿ
ಪೌರಾಯುಕ್ತರಾದ ವಿಜಯ್ ನೇತೃತ್ವದಲ್ಲಿ 2025 -26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಪ್ರತಿ ವರ್ಷ ನಡೆಯುವ ಸಭೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಪರ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆಗೆ ಆಗಮಿಸಿ ಬಜೆಟ್ ನಲ್ಲಿ ಹೊಸದಾಗಿ ಸೇರಿಸಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಮ್ಮ, ತಮ್ಮ ಸಲಹೆ ಸೂಚನೆಗಳು ಮತ್ತು ಅಭಿಪ್ರಾಯಗಳನ್ನು ನೀಡುವುದು ವಾಡಿಕೆಯಾಗಿತ್ತು .
ಆದರೆ ಈ ಬಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಪರಿಣಾಮ ಸರ್ಕಾರ ಹಣಕಾಸಿನ ದುಸ್ಥಿತಿಯನ್ನು ಎದುರಿಸುತ್ತಿದ್ದು ಯಾವ ಅಭಿವೃದ್ಧಿ ಕೆಲಸಗಳು ನಡೆಯುವುದಿಲ್ಲ ಎಂಬ ವಿಚಾರ ಅರಿತಿರುವ ಸಾರ್ವಜನಿಕರು ಮತ್ತು ಸಂಘಟಕರುಗಳು ಪೂರ್ವಭಾವಿ ಸಭೆಗೆ ಗೈರಾಗಿರಬಹುದು ಎನ್ನಲಾಗಿದೆ .ಈಗಾಗಲೇ ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಹಣಕಾಸಿನ ಕೊರತೆಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಮಾಹಿತಿಯನ್ನು ಅರಿತಿರುವ ನಂಜನಗೂಡಿನ ವಾಸಿಗಳು ಹಾಗೂ ಸಾರ್ವಜನಿಕರು ಪೂರ್ವಭಾವಿ ಸಭೆಗೆ ಹೋಗಿ ಸುಮ್ಮನೆ ಕಾಲಹರಣ ಮಾಡುವುದರ ಬದಲಾಗಿ ಸಭೆಗೆ ಹೋಗದಿರುವುದೇ ಮೇಲು ಎಂಬ ನಿರ್ಧಾರಕ್ಕೆ ಬಂದೋ ಅಥವಾ ನಗರ ಸಭೆಯವರ ಪ್ರಚಾರದ ಕೊರತೆಯಿಂದಲೋ ಸಾರ್ವಜನಿಕರು ಸಭೆಗೆ ಬಾರದೆ ಯಾವುದೇ ವಿಚಾರಗಳು ಸಭೆಯಲ್ಲಿ ಚರ್ಚೆಯಾಗದೆ ಕೇವಲ ಬೆರಳೆಣಿಕೆಯಷ್ಟು ಪತ್ರಕರ್ತರು, ಸಾರ್ವಜನಿಕರು ಹಾಗೂ ನಗರಸಭಾ ಸಿಬ್ಬಂದಿಗಳಿಗೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಹಾಗೂ ಪೌರಾಯುಕ್ತ ವಿಜಯ್ ನಂಜನಗೂಡು ನಗರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ ಉತ್ತಮ ಬಜೆಟ್ ನೀಡುವ ಆರಿಕೆ ಮಾತುಗಳನ್ನಾಡಿ ತರಾತುರಿಯಲ್ಲಿ ಆಯ ವ್ಯಯ ಸಭೆಯನ್ನು ಮುಕ್ತಾಯಗೊಳಿಸಿದ್ದಾರೆ
ಪೂರ್ವಾಬಾವಿ ಸಭೆಯಲ್ಲಿ ಸಾರ್ವಜನಿಕರ ಕೊರತೆಯಿಂದ ಎದ್ದು ಕಾಣುತ್ತಿದ್ದ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಸದಸ್ಯರು ಮೌನಕ್ಕೆ ಶರಣಾಗಿದ್ದರು ಎನ್ನುವಂತಿತ್ತು
ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಉಪಾಧ್ಯಕ್ಷರಾದ ರೆಹನಾ ಬಾನು, ನಗರ ಸಭಾ ಪೌರಾಯುಕ್ತರಾದ ವಿಜಯ್, ಸದಸ್ಯರುಗಳಾದ ಮಹದೇವ ಪ್ರಸಾದ್, ಗಾಯತ್ರಿ ಮೋಹನ್,ಸಿದ್ದಿಕ್ಅಹ್ಮದ್,ಮಹೇಶ್ ಅತ್ತಿಕಾನೆ ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು ವರದಿ: ಮೋಹನ್

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago