Latest

ನಗರಸಭಾ ಆಡಳಿತಕ್ಕೆ ಮುಖಭಂಗ, ಖಾಲಿ ಕುರ್ಚಿಗಳ ಪ್ರದರ್ಶನ

ನಂಜನಗೂಡು: ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ನಂಜನಗೂಡು ನಗರವೂ ಕೂಡ ಒಂದಾಗಿದ್ದು ಪುರಸಭೆಯಿಂದ ನಗರಸಭೆಯಾಗಿ ಬಡ್ತಿ ಪಡೆದು ಸುಮಾರು ವರ್ಷಗಳೇ ಕಳೆದಿವೆ .ಪ್ರತಿ ವರ್ಷದಂತೆ 2025 -26ನೇ ಸಾಲಿನ ಆಯ ವ್ಯಯ ಪೂರ್ವಭಾವಿ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ತಿಳಿಸಿ ಪರಿಹಾರ ಕಲ್ಪಿಸಿಕೊಡುವ ಯಾವೊಬ್ಬ ಸಾರ್ವಜನಿಕರು ಕೂಡ ಆಯವ್ಯಯ ಪೂರ್ವಭಾವಿ ಸಭೆಗೆ ಆಗಮಿಸದೆ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಆಡಳಿತಕ್ಕೆ ಮುಖಭಂಗವಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಅಧ್ಯಕ್ಷತೆಯಲ್ಲಿ
ಪೌರಾಯುಕ್ತರಾದ ವಿಜಯ್ ನೇತೃತ್ವದಲ್ಲಿ 2025 -26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಪ್ರತಿ ವರ್ಷ ನಡೆಯುವ ಸಭೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಪರ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆಗೆ ಆಗಮಿಸಿ ಬಜೆಟ್ ನಲ್ಲಿ ಹೊಸದಾಗಿ ಸೇರಿಸಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಮ್ಮ, ತಮ್ಮ ಸಲಹೆ ಸೂಚನೆಗಳು ಮತ್ತು ಅಭಿಪ್ರಾಯಗಳನ್ನು ನೀಡುವುದು ವಾಡಿಕೆಯಾಗಿತ್ತು .
ಆದರೆ ಈ ಬಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಪರಿಣಾಮ ಸರ್ಕಾರ ಹಣಕಾಸಿನ ದುಸ್ಥಿತಿಯನ್ನು ಎದುರಿಸುತ್ತಿದ್ದು ಯಾವ ಅಭಿವೃದ್ಧಿ ಕೆಲಸಗಳು ನಡೆಯುವುದಿಲ್ಲ ಎಂಬ ವಿಚಾರ ಅರಿತಿರುವ ಸಾರ್ವಜನಿಕರು ಮತ್ತು ಸಂಘಟಕರುಗಳು ಪೂರ್ವಭಾವಿ ಸಭೆಗೆ ಗೈರಾಗಿರಬಹುದು ಎನ್ನಲಾಗಿದೆ .ಈಗಾಗಲೇ ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಹಣಕಾಸಿನ ಕೊರತೆಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಮಾಹಿತಿಯನ್ನು ಅರಿತಿರುವ ನಂಜನಗೂಡಿನ ವಾಸಿಗಳು ಹಾಗೂ ಸಾರ್ವಜನಿಕರು ಪೂರ್ವಭಾವಿ ಸಭೆಗೆ ಹೋಗಿ ಸುಮ್ಮನೆ ಕಾಲಹರಣ ಮಾಡುವುದರ ಬದಲಾಗಿ ಸಭೆಗೆ ಹೋಗದಿರುವುದೇ ಮೇಲು ಎಂಬ ನಿರ್ಧಾರಕ್ಕೆ ಬಂದೋ ಅಥವಾ ನಗರ ಸಭೆಯವರ ಪ್ರಚಾರದ ಕೊರತೆಯಿಂದಲೋ ಸಾರ್ವಜನಿಕರು ಸಭೆಗೆ ಬಾರದೆ ಯಾವುದೇ ವಿಚಾರಗಳು ಸಭೆಯಲ್ಲಿ ಚರ್ಚೆಯಾಗದೆ ಕೇವಲ ಬೆರಳೆಣಿಕೆಯಷ್ಟು ಪತ್ರಕರ್ತರು, ಸಾರ್ವಜನಿಕರು ಹಾಗೂ ನಗರಸಭಾ ಸಿಬ್ಬಂದಿಗಳಿಗೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಹಾಗೂ ಪೌರಾಯುಕ್ತ ವಿಜಯ್ ನಂಜನಗೂಡು ನಗರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ ಉತ್ತಮ ಬಜೆಟ್ ನೀಡುವ ಆರಿಕೆ ಮಾತುಗಳನ್ನಾಡಿ ತರಾತುರಿಯಲ್ಲಿ ಆಯ ವ್ಯಯ ಸಭೆಯನ್ನು ಮುಕ್ತಾಯಗೊಳಿಸಿದ್ದಾರೆ
ಪೂರ್ವಾಬಾವಿ ಸಭೆಯಲ್ಲಿ ಸಾರ್ವಜನಿಕರ ಕೊರತೆಯಿಂದ ಎದ್ದು ಕಾಣುತ್ತಿದ್ದ ಖಾಲಿ ಕುರ್ಚಿಗಳ ದರ್ಶನದಿಂದಾಗಿ ನಗರಸಭಾ ಸದಸ್ಯರು ಮೌನಕ್ಕೆ ಶರಣಾಗಿದ್ದರು ಎನ್ನುವಂತಿತ್ತು
ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಉಪಾಧ್ಯಕ್ಷರಾದ ರೆಹನಾ ಬಾನು, ನಗರ ಸಭಾ ಪೌರಾಯುಕ್ತರಾದ ವಿಜಯ್, ಸದಸ್ಯರುಗಳಾದ ಮಹದೇವ ಪ್ರಸಾದ್, ಗಾಯತ್ರಿ ಮೋಹನ್,ಸಿದ್ದಿಕ್ಅಹ್ಮದ್,ಮಹೇಶ್ ಅತ್ತಿಕಾನೆ ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು ವರದಿ: ಮೋಹನ್

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

10 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

10 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago