ಕಾರವಾರ: ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಯಶಸ್ವಿಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ಅಗತ್ಯ ಸಿದ್ಧತೆಗಳನ್ನು
ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ, ವಿಡೀಯೋ ಕಾನ್ಸರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸಮಿತಿಯ ಸಭೆಗಳನ್ನು ನಡೆಸಿ, ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ಕೂಡಲೇ ಸಲ್ಲಿಸುವಂತೆ ಸೂಚಿಸಿದರು.
ಕದಂಬ ಜ್ಯೋತಿ ಹೊರಡುವ ದಿನದಂದು ವಿವಿಧ ಕಲಾತಂಡಗಳಿಂದ ಆಕರ್ಷಕ ಮೆರವಣಿಗೆಯನ್ನು ಆಯೋಜಿಸಬೇಕು ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದರು.
ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾ ಸ್ಪರ್ಧೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಸೂಚಿಸಿದ ಅವರು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಂದ ಅರ್ಜಿ ಸ್ವೀಕಾರ ಮಾಡುವ ಕೊನೆಯ ದಿನಾಂಕವನ್ನು ಪ್ರಕಟಿಸಿ, ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸೂಚಿಸಿದರು.
ಪ್ರಸ್ತುತ ಬಿಸಿಲಿನ ತಾಪ ಅಧಿಕವಾಗಿರುವುದರಿಂದ ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಬೇಕು, ಕೆ.ಎಸ್.ಆರ್.ಟಿ.ಸಿಯಿಂದ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಬೇಕು, ವಸತಿ ಮತ್ತು ಊಟೋಪಚಾರ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರವಹಿಸಬೇಕು, ಅಕರ್ಷಕ ವೇದಿಕೆ ನಿರ್ಮಾಣ ಮತ್ತು ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದರು.
ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ಅಗತ್ಯವಿದ್ದಲ್ಲಿ ಉಪ ಸಮಿತಿಗಳನ್ನು ರಚಿಸಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಶುಕ್ರವಾರದ ಒಳಗೆ ಎಲ್ಲಾ ಸಮಿತಿಗಳು ಸಭೆಯನ್ನು ನಡೆಸಿ ವರದಿ ನೀಡುವಂತೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಎಲ್ಲಾ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳು ಹಾಜರಿದ್ದರು.
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…