Latest

ಕಳಚೆ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಕಳಚೆ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವರು ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿದರು. ಇದಕ್ಕೆ ವಿರುದ್ಧವಾಗಿ ಇನ್ನೂ ಕೆಲವರು ಪುನರ್ವಸತಿ ಬದಲು ಪರಿಹಾರ ಕೊಡಿ ಎಂದು ಆಗ್ರಹಿಸಿದರು.

ಈ ಬಗ್ಗೆ ನಿರ್ಣಯ ಕೈಗೊಳ್ಳಲು ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಗ್ರಾಮಸಭೆ ನಡೆಸುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೌಖಿಕ ಆದೇಶ ನೀಡಿದರು. ಸಂತ್ರಸ್ತರಿಗೆ ಪುನರ್ವಸತಿ ಅಥವಾ ಪರಿಹಾರವಾ ಎಂಬ ವಿಷಯದಲ್ಲಿನ ಗೊಂದಲವನ್ನು ಆ ಗ್ರಾಮಸಭೆಯಲ್ಲಿ ಬಗೆಹರಿಸಿಕೊಳ್ಳುವಂತೆ ಅವರು ಸೂಚಿಸಿದರು.

ಯಲ್ಲಾಪುರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೊದಲು ನೇರವಾಗಿ ಕಳಚೆಗೆ ತೆರಳಿದರು. ಅಲ್ಲಿನ ಕಮಲಾಕರ ಗಾಂವಕರ್ ಅವರ ಮನೆ ಹಾಗೂ ಸುತ್ತಲಿನ ಪರಿಸರ ವೀಕ್ಷಿಸಿದರು. ತೋಟಕ್ಕೆ ತೆರಳಿ ಅಲ್ಲಿ ಆದದಹಾನಿಯ ಬಗ್ಗೆ ಅಂದಾಜಿಸಿದರು. ರಸ್ತೆ ಬದಿಯ ಇನ್ನೆರಡು ತೋಟಗಳನ್ನು ವೀಕ್ಷಿಸಿ ಹಾನಿ ತಡೆಗೆ ಕೈಗೊಳ್ಳಬಹುದಾದ ಮಾರ್ಗಗಳ ಬಗ್ಗೆ ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನವ‌ರ್ ಹಾಗೂ ಕಂದಾಯ ನಿರೀಕ್ಷಕಿ ಜ್ಯೋತಿ ನಾಯ್ಕ ಅವರೊಂದಿಗೆ ಚರ್ಚಿಸಿದರು. ತಳಕೆ ಬೈಲ್ ಭೂಕುಸಿತ ಸ್ಥಳ ವೀಕ್ಷಣೆ ಮಾಡಿದ ಅವರು ನಂತರ ಬೀಗ ಬೀಗಾರ-ಬಾಗಿನಕಟ್ಟಾ ರಸ್ತೆ ಸಂಪರ್ಕ ಕಡಿತವಾಗಿರುವುದನ್ನು ಗಮನಿಸಿದರು

ಅಲ್ಲಿದ್ದ ಜನ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು. ಇಡೀ ಊರನ್ನು ಸ್ಥಳಾಂತರಿಸಲು ಕಾನೂನಿನಲ್ಲಿ ಅವಕಾಶವಿದ್ದು, ಕೆಲ ಕುಟುಂಬಗಳಿಗೆ ಮಾತ್ರ ಬೇರೆಡೆ ವಸತಿ ಕಲ್ಪಿಸುವುದು ಕಷ್ಟ ವಸತಿಗೆ ಬೇರೆ ಜಾಗ ನೀಡಿ, ಪರಿಹಾರ ಕೊಡುವುದರ ಜೊತೆ ಇಲ್ಲಿನ ತೋಟವನ್ನು ಹಾಗೇ ಬಿಡಿ ಎಂಬ ಬೇಡಿಕೆ ಈಡೇರಿಕೆಗೆ ಅವಕಾಶವಿಲ್ಲ ಎಂದು ಅಲ್ಲಿದ್ದವರಿಗೆ ತಿಳಿಹೇಳಿದರು.

ಗ್ರಾಮಸ್ಥರು ಒಗ್ಗಟ್ಟಿನಿಂದ ನಿರ್ಣಯ ಕೈಗೊಂಡರೆ ಮಾತ್ರ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿ ಪುನರ್ವಸತಿ ಸಾಧ್ಯ ಎನ್ನುವದರ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮನವೊಲೈಸಿ ಸರಿಯಾದ ನಿರ್ಣಯ ಕೈಗೊಳ್ಳಲು ಸಹಾಯ ಮಾಡುವಂತೆ ಅಧೀನ ಅಧಿಕಾರಿಗಳಿಗೆ ತಿಳಿಸಿದರು. ನಂತರ ತಹಶೀಲ್ದಾರ್ ಕಚೇರಿಯ ರೆಕಾರ್ಡ್ ರೂಂಗೆ ತೆರಳಿ ದಾಖಲೆಗಳನ್ನು ಗಮನಿಸಿದರು. ಗ್ರಾಮ ಆಡಳಿತಾಧಿಕಾರಿಗಳಿಗೆ ಅಗತ್ಯವಿರುವ ಕಪಾಟುಗಳನ್ನು ಹಸ್ತಾಂತರಿಸಿದರು. ಗ್ರಾಮ ಆಡಳಿತಾಧಿಕಾರಿ ದೀಪಿಕಾ ಹೊಸನಿ, ಪಿಡಿಓ ಗಂಗಾಧರ ಭಟ್ಟ, ತಾ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ ಧನವಾಡಕರ್ ಜೊತೆಗಿದ್ದರು.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago