Latest

ಕಳಚೆ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಕಳಚೆ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವರು ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿದರು. ಇದಕ್ಕೆ ವಿರುದ್ಧವಾಗಿ ಇನ್ನೂ ಕೆಲವರು ಪುನರ್ವಸತಿ ಬದಲು ಪರಿಹಾರ ಕೊಡಿ ಎಂದು ಆಗ್ರಹಿಸಿದರು.

ಈ ಬಗ್ಗೆ ನಿರ್ಣಯ ಕೈಗೊಳ್ಳಲು ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಗ್ರಾಮಸಭೆ ನಡೆಸುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೌಖಿಕ ಆದೇಶ ನೀಡಿದರು. ಸಂತ್ರಸ್ತರಿಗೆ ಪುನರ್ವಸತಿ ಅಥವಾ ಪರಿಹಾರವಾ ಎಂಬ ವಿಷಯದಲ್ಲಿನ ಗೊಂದಲವನ್ನು ಆ ಗ್ರಾಮಸಭೆಯಲ್ಲಿ ಬಗೆಹರಿಸಿಕೊಳ್ಳುವಂತೆ ಅವರು ಸೂಚಿಸಿದರು.

ಯಲ್ಲಾಪುರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೊದಲು ನೇರವಾಗಿ ಕಳಚೆಗೆ ತೆರಳಿದರು. ಅಲ್ಲಿನ ಕಮಲಾಕರ ಗಾಂವಕರ್ ಅವರ ಮನೆ ಹಾಗೂ ಸುತ್ತಲಿನ ಪರಿಸರ ವೀಕ್ಷಿಸಿದರು. ತೋಟಕ್ಕೆ ತೆರಳಿ ಅಲ್ಲಿ ಆದದಹಾನಿಯ ಬಗ್ಗೆ ಅಂದಾಜಿಸಿದರು. ರಸ್ತೆ ಬದಿಯ ಇನ್ನೆರಡು ತೋಟಗಳನ್ನು ವೀಕ್ಷಿಸಿ ಹಾನಿ ತಡೆಗೆ ಕೈಗೊಳ್ಳಬಹುದಾದ ಮಾರ್ಗಗಳ ಬಗ್ಗೆ ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನವ‌ರ್ ಹಾಗೂ ಕಂದಾಯ ನಿರೀಕ್ಷಕಿ ಜ್ಯೋತಿ ನಾಯ್ಕ ಅವರೊಂದಿಗೆ ಚರ್ಚಿಸಿದರು. ತಳಕೆ ಬೈಲ್ ಭೂಕುಸಿತ ಸ್ಥಳ ವೀಕ್ಷಣೆ ಮಾಡಿದ ಅವರು ನಂತರ ಬೀಗ ಬೀಗಾರ-ಬಾಗಿನಕಟ್ಟಾ ರಸ್ತೆ ಸಂಪರ್ಕ ಕಡಿತವಾಗಿರುವುದನ್ನು ಗಮನಿಸಿದರು

ಅಲ್ಲಿದ್ದ ಜನ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು. ಇಡೀ ಊರನ್ನು ಸ್ಥಳಾಂತರಿಸಲು ಕಾನೂನಿನಲ್ಲಿ ಅವಕಾಶವಿದ್ದು, ಕೆಲ ಕುಟುಂಬಗಳಿಗೆ ಮಾತ್ರ ಬೇರೆಡೆ ವಸತಿ ಕಲ್ಪಿಸುವುದು ಕಷ್ಟ ವಸತಿಗೆ ಬೇರೆ ಜಾಗ ನೀಡಿ, ಪರಿಹಾರ ಕೊಡುವುದರ ಜೊತೆ ಇಲ್ಲಿನ ತೋಟವನ್ನು ಹಾಗೇ ಬಿಡಿ ಎಂಬ ಬೇಡಿಕೆ ಈಡೇರಿಕೆಗೆ ಅವಕಾಶವಿಲ್ಲ ಎಂದು ಅಲ್ಲಿದ್ದವರಿಗೆ ತಿಳಿಹೇಳಿದರು.

ಗ್ರಾಮಸ್ಥರು ಒಗ್ಗಟ್ಟಿನಿಂದ ನಿರ್ಣಯ ಕೈಗೊಂಡರೆ ಮಾತ್ರ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿ ಪುನರ್ವಸತಿ ಸಾಧ್ಯ ಎನ್ನುವದರ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮನವೊಲೈಸಿ ಸರಿಯಾದ ನಿರ್ಣಯ ಕೈಗೊಳ್ಳಲು ಸಹಾಯ ಮಾಡುವಂತೆ ಅಧೀನ ಅಧಿಕಾರಿಗಳಿಗೆ ತಿಳಿಸಿದರು. ನಂತರ ತಹಶೀಲ್ದಾರ್ ಕಚೇರಿಯ ರೆಕಾರ್ಡ್ ರೂಂಗೆ ತೆರಳಿ ದಾಖಲೆಗಳನ್ನು ಗಮನಿಸಿದರು. ಗ್ರಾಮ ಆಡಳಿತಾಧಿಕಾರಿಗಳಿಗೆ ಅಗತ್ಯವಿರುವ ಕಪಾಟುಗಳನ್ನು ಹಸ್ತಾಂತರಿಸಿದರು. ಗ್ರಾಮ ಆಡಳಿತಾಧಿಕಾರಿ ದೀಪಿಕಾ ಹೊಸನಿ, ಪಿಡಿಓ ಗಂಗಾಧರ ಭಟ್ಟ, ತಾ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ ಧನವಾಡಕರ್ ಜೊತೆಗಿದ್ದರು.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

14 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

15 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

15 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

15 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

15 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago