Latest

ಕಳಚೆ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಕಳಚೆ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವರು ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿದರು. ಇದಕ್ಕೆ ವಿರುದ್ಧವಾಗಿ ಇನ್ನೂ ಕೆಲವರು ಪುನರ್ವಸತಿ ಬದಲು ಪರಿಹಾರ ಕೊಡಿ ಎಂದು ಆಗ್ರಹಿಸಿದರು.

ಈ ಬಗ್ಗೆ ನಿರ್ಣಯ ಕೈಗೊಳ್ಳಲು ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಗ್ರಾಮಸಭೆ ನಡೆಸುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೌಖಿಕ ಆದೇಶ ನೀಡಿದರು. ಸಂತ್ರಸ್ತರಿಗೆ ಪುನರ್ವಸತಿ ಅಥವಾ ಪರಿಹಾರವಾ ಎಂಬ ವಿಷಯದಲ್ಲಿನ ಗೊಂದಲವನ್ನು ಆ ಗ್ರಾಮಸಭೆಯಲ್ಲಿ ಬಗೆಹರಿಸಿಕೊಳ್ಳುವಂತೆ ಅವರು ಸೂಚಿಸಿದರು.

ಯಲ್ಲಾಪುರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೊದಲು ನೇರವಾಗಿ ಕಳಚೆಗೆ ತೆರಳಿದರು. ಅಲ್ಲಿನ ಕಮಲಾಕರ ಗಾಂವಕರ್ ಅವರ ಮನೆ ಹಾಗೂ ಸುತ್ತಲಿನ ಪರಿಸರ ವೀಕ್ಷಿಸಿದರು. ತೋಟಕ್ಕೆ ತೆರಳಿ ಅಲ್ಲಿ ಆದದಹಾನಿಯ ಬಗ್ಗೆ ಅಂದಾಜಿಸಿದರು. ರಸ್ತೆ ಬದಿಯ ಇನ್ನೆರಡು ತೋಟಗಳನ್ನು ವೀಕ್ಷಿಸಿ ಹಾನಿ ತಡೆಗೆ ಕೈಗೊಳ್ಳಬಹುದಾದ ಮಾರ್ಗಗಳ ಬಗ್ಗೆ ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನವ‌ರ್ ಹಾಗೂ ಕಂದಾಯ ನಿರೀಕ್ಷಕಿ ಜ್ಯೋತಿ ನಾಯ್ಕ ಅವರೊಂದಿಗೆ ಚರ್ಚಿಸಿದರು. ತಳಕೆ ಬೈಲ್ ಭೂಕುಸಿತ ಸ್ಥಳ ವೀಕ್ಷಣೆ ಮಾಡಿದ ಅವರು ನಂತರ ಬೀಗ ಬೀಗಾರ-ಬಾಗಿನಕಟ್ಟಾ ರಸ್ತೆ ಸಂಪರ್ಕ ಕಡಿತವಾಗಿರುವುದನ್ನು ಗಮನಿಸಿದರು

ಅಲ್ಲಿದ್ದ ಜನ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು. ಇಡೀ ಊರನ್ನು ಸ್ಥಳಾಂತರಿಸಲು ಕಾನೂನಿನಲ್ಲಿ ಅವಕಾಶವಿದ್ದು, ಕೆಲ ಕುಟುಂಬಗಳಿಗೆ ಮಾತ್ರ ಬೇರೆಡೆ ವಸತಿ ಕಲ್ಪಿಸುವುದು ಕಷ್ಟ ವಸತಿಗೆ ಬೇರೆ ಜಾಗ ನೀಡಿ, ಪರಿಹಾರ ಕೊಡುವುದರ ಜೊತೆ ಇಲ್ಲಿನ ತೋಟವನ್ನು ಹಾಗೇ ಬಿಡಿ ಎಂಬ ಬೇಡಿಕೆ ಈಡೇರಿಕೆಗೆ ಅವಕಾಶವಿಲ್ಲ ಎಂದು ಅಲ್ಲಿದ್ದವರಿಗೆ ತಿಳಿಹೇಳಿದರು.

ಗ್ರಾಮಸ್ಥರು ಒಗ್ಗಟ್ಟಿನಿಂದ ನಿರ್ಣಯ ಕೈಗೊಂಡರೆ ಮಾತ್ರ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿ ಪುನರ್ವಸತಿ ಸಾಧ್ಯ ಎನ್ನುವದರ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮನವೊಲೈಸಿ ಸರಿಯಾದ ನಿರ್ಣಯ ಕೈಗೊಳ್ಳಲು ಸಹಾಯ ಮಾಡುವಂತೆ ಅಧೀನ ಅಧಿಕಾರಿಗಳಿಗೆ ತಿಳಿಸಿದರು. ನಂತರ ತಹಶೀಲ್ದಾರ್ ಕಚೇರಿಯ ರೆಕಾರ್ಡ್ ರೂಂಗೆ ತೆರಳಿ ದಾಖಲೆಗಳನ್ನು ಗಮನಿಸಿದರು. ಗ್ರಾಮ ಆಡಳಿತಾಧಿಕಾರಿಗಳಿಗೆ ಅಗತ್ಯವಿರುವ ಕಪಾಟುಗಳನ್ನು ಹಸ್ತಾಂತರಿಸಿದರು. ಗ್ರಾಮ ಆಡಳಿತಾಧಿಕಾರಿ ದೀಪಿಕಾ ಹೊಸನಿ, ಪಿಡಿಓ ಗಂಗಾಧರ ಭಟ್ಟ, ತಾ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ ಧನವಾಡಕರ್ ಜೊತೆಗಿದ್ದರು.

ಭ್ರಷ್ಟರ ಬೇಟೆ

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

3 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

3 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

13 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

13 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

13 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

13 hours ago