Latest

ಕಳಚೆ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಕಳಚೆ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವರು ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿದರು. ಇದಕ್ಕೆ ವಿರುದ್ಧವಾಗಿ ಇನ್ನೂ ಕೆಲವರು ಪುನರ್ವಸತಿ ಬದಲು ಪರಿಹಾರ ಕೊಡಿ ಎಂದು ಆಗ್ರಹಿಸಿದರು.

ಈ ಬಗ್ಗೆ ನಿರ್ಣಯ ಕೈಗೊಳ್ಳಲು ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಗ್ರಾಮಸಭೆ ನಡೆಸುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೌಖಿಕ ಆದೇಶ ನೀಡಿದರು. ಸಂತ್ರಸ್ತರಿಗೆ ಪುನರ್ವಸತಿ ಅಥವಾ ಪರಿಹಾರವಾ ಎಂಬ ವಿಷಯದಲ್ಲಿನ ಗೊಂದಲವನ್ನು ಆ ಗ್ರಾಮಸಭೆಯಲ್ಲಿ ಬಗೆಹರಿಸಿಕೊಳ್ಳುವಂತೆ ಅವರು ಸೂಚಿಸಿದರು.

ಯಲ್ಲಾಪುರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೊದಲು ನೇರವಾಗಿ ಕಳಚೆಗೆ ತೆರಳಿದರು. ಅಲ್ಲಿನ ಕಮಲಾಕರ ಗಾಂವಕರ್ ಅವರ ಮನೆ ಹಾಗೂ ಸುತ್ತಲಿನ ಪರಿಸರ ವೀಕ್ಷಿಸಿದರು. ತೋಟಕ್ಕೆ ತೆರಳಿ ಅಲ್ಲಿ ಆದದಹಾನಿಯ ಬಗ್ಗೆ ಅಂದಾಜಿಸಿದರು. ರಸ್ತೆ ಬದಿಯ ಇನ್ನೆರಡು ತೋಟಗಳನ್ನು ವೀಕ್ಷಿಸಿ ಹಾನಿ ತಡೆಗೆ ಕೈಗೊಳ್ಳಬಹುದಾದ ಮಾರ್ಗಗಳ ಬಗ್ಗೆ ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನವ‌ರ್ ಹಾಗೂ ಕಂದಾಯ ನಿರೀಕ್ಷಕಿ ಜ್ಯೋತಿ ನಾಯ್ಕ ಅವರೊಂದಿಗೆ ಚರ್ಚಿಸಿದರು. ತಳಕೆ ಬೈಲ್ ಭೂಕುಸಿತ ಸ್ಥಳ ವೀಕ್ಷಣೆ ಮಾಡಿದ ಅವರು ನಂತರ ಬೀಗ ಬೀಗಾರ-ಬಾಗಿನಕಟ್ಟಾ ರಸ್ತೆ ಸಂಪರ್ಕ ಕಡಿತವಾಗಿರುವುದನ್ನು ಗಮನಿಸಿದರು

ಅಲ್ಲಿದ್ದ ಜನ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು. ಇಡೀ ಊರನ್ನು ಸ್ಥಳಾಂತರಿಸಲು ಕಾನೂನಿನಲ್ಲಿ ಅವಕಾಶವಿದ್ದು, ಕೆಲ ಕುಟುಂಬಗಳಿಗೆ ಮಾತ್ರ ಬೇರೆಡೆ ವಸತಿ ಕಲ್ಪಿಸುವುದು ಕಷ್ಟ ವಸತಿಗೆ ಬೇರೆ ಜಾಗ ನೀಡಿ, ಪರಿಹಾರ ಕೊಡುವುದರ ಜೊತೆ ಇಲ್ಲಿನ ತೋಟವನ್ನು ಹಾಗೇ ಬಿಡಿ ಎಂಬ ಬೇಡಿಕೆ ಈಡೇರಿಕೆಗೆ ಅವಕಾಶವಿಲ್ಲ ಎಂದು ಅಲ್ಲಿದ್ದವರಿಗೆ ತಿಳಿಹೇಳಿದರು.

ಗ್ರಾಮಸ್ಥರು ಒಗ್ಗಟ್ಟಿನಿಂದ ನಿರ್ಣಯ ಕೈಗೊಂಡರೆ ಮಾತ್ರ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿ ಪುನರ್ವಸತಿ ಸಾಧ್ಯ ಎನ್ನುವದರ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮನವೊಲೈಸಿ ಸರಿಯಾದ ನಿರ್ಣಯ ಕೈಗೊಳ್ಳಲು ಸಹಾಯ ಮಾಡುವಂತೆ ಅಧೀನ ಅಧಿಕಾರಿಗಳಿಗೆ ತಿಳಿಸಿದರು. ನಂತರ ತಹಶೀಲ್ದಾರ್ ಕಚೇರಿಯ ರೆಕಾರ್ಡ್ ರೂಂಗೆ ತೆರಳಿ ದಾಖಲೆಗಳನ್ನು ಗಮನಿಸಿದರು. ಗ್ರಾಮ ಆಡಳಿತಾಧಿಕಾರಿಗಳಿಗೆ ಅಗತ್ಯವಿರುವ ಕಪಾಟುಗಳನ್ನು ಹಸ್ತಾಂತರಿಸಿದರು. ಗ್ರಾಮ ಆಡಳಿತಾಧಿಕಾರಿ ದೀಪಿಕಾ ಹೊಸನಿ, ಪಿಡಿಓ ಗಂಗಾಧರ ಭಟ್ಟ, ತಾ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ ಧನವಾಡಕರ್ ಜೊತೆಗಿದ್ದರು.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago