ನಗರದ ಶಾಂತಿನಿಕೇತನ ಕಾಲೋನಿಯ ಲಲಿತಾ ಎಂಬ ಮಹಿಳೆ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ ವೇಳೆ, ಪತಿ ಕಳೆದ ವರ್ಷವೇ ವಿಚ್ಛೇದನ ಪಡೆದಿದ್ದಾನೆ ಎಂಬ ವಿಚಾರ ತಿಳಿದು ಆಕ್ರೋಶಗೊಂಡು, ಕೋರ್ಟ್ ಆವರಣದಲ್ಲೇ ಸಹೋದರಿಯೊಂದಿಗೆ ಸೇರಿ ಪತಿಗೆ ಥಳಿಸಿದ ಘಟನೆ ಸೋಮವಾರ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಲಿತಾ ವಾಯವ್ಯ ಸಾರಿಗೆ ಸಂಸ್ಥೆಯ ನೌಕರನಾದ ಬೆಳಗಾವಿ ಜಿಲ್ಲೆ ರಾಮದುರ್ಗದ ಕುಮಾರನ ವಿರುದ್ಧ ಜೀವನಾಂಶಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದರು. ಆದರೆ, ನ್ಯಾಯಾಲಯದಲ್ಲಿ ಹಾಜರಾಗಿದ್ದಾಗ, ಕುಮಾರ ಕಳೆದ ವರ್ಷ ಜೂನ್ ತಿಂಗಳಲ್ಲೇ ರಾಮದುರ್ಗ ಕೋರ್ಟ್ನಲ್ಲಿ ವಿಚ್ಛೇದನ ಪಡೆದಿರುವುದು ತಿಳಿದುಬಂದಿತು. ಈ ವಿಷಯ ತಿಳಿದ ಲಲಿತಾ, ವಿಚ್ಛೇದನಕ್ಕಾಗಿ ತನ್ನ ನಕಲಿ ಸಹಿಯನ್ನು ಬಳಸಲಾಗಿದೆ ಎಂದು ಆರೋಪಿಸಿ, ತೀವ್ರ ಸಿಟ್ಟಿಗೆದ್ದರು.
ಆಕ್ರೋಶದಲ್ಲಿ, ತಮ್ಮ ಸಹೋದರಿಯೊಂದಿಗೆ ಸೇರಿ ಪತಿಗೆ ಹಲ್ಲೆ ನಡೆಸಿದರು. ಈ ಸಂದರ್ಭ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಮಧ್ಯಪ್ರವೇಶಿಸಿ, ಕುಮಾರನನ್ನು ಮಹಿಳೆಯರಿಂದ ಬಿಡಿಸಿ ಕಳುಹಿಸಿದರು. ಘಟನೆಯ ವಿಡಿಯೋ ಅಲ್ಲಿದ್ದ ಸ್ಥಳೀಯರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…