ನಗರದ ಶಾಂತಿನಿಕೇತನ ಕಾಲೋನಿಯ ಲಲಿತಾ ಎಂಬ ಮಹಿಳೆ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ ವೇಳೆ, ಪತಿ ಕಳೆದ ವರ್ಷವೇ ವಿಚ್ಛೇದನ ಪಡೆದಿದ್ದಾನೆ ಎಂಬ ವಿಚಾರ ತಿಳಿದು ಆಕ್ರೋಶಗೊಂಡು, ಕೋರ್ಟ್ ಆವರಣದಲ್ಲೇ ಸಹೋದರಿಯೊಂದಿಗೆ ಸೇರಿ ಪತಿಗೆ ಥಳಿಸಿದ ಘಟನೆ ಸೋಮವಾರ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಲಿತಾ ವಾಯವ್ಯ ಸಾರಿಗೆ ಸಂಸ್ಥೆಯ ನೌಕರನಾದ ಬೆಳಗಾವಿ ಜಿಲ್ಲೆ ರಾಮದುರ್ಗದ ಕುಮಾರನ ವಿರುದ್ಧ ಜೀವನಾಂಶಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದರು. ಆದರೆ, ನ್ಯಾಯಾಲಯದಲ್ಲಿ ಹಾಜರಾಗಿದ್ದಾಗ, ಕುಮಾರ ಕಳೆದ ವರ್ಷ ಜೂನ್ ತಿಂಗಳಲ್ಲೇ ರಾಮದುರ್ಗ ಕೋರ್ಟ್ನಲ್ಲಿ ವಿಚ್ಛೇದನ ಪಡೆದಿರುವುದು ತಿಳಿದುಬಂದಿತು. ಈ ವಿಷಯ ತಿಳಿದ ಲಲಿತಾ, ವಿಚ್ಛೇದನಕ್ಕಾಗಿ ತನ್ನ ನಕಲಿ ಸಹಿಯನ್ನು ಬಳಸಲಾಗಿದೆ ಎಂದು ಆರೋಪಿಸಿ, ತೀವ್ರ ಸಿಟ್ಟಿಗೆದ್ದರು.
ಆಕ್ರೋಶದಲ್ಲಿ, ತಮ್ಮ ಸಹೋದರಿಯೊಂದಿಗೆ ಸೇರಿ ಪತಿಗೆ ಹಲ್ಲೆ ನಡೆಸಿದರು. ಈ ಸಂದರ್ಭ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಮಧ್ಯಪ್ರವೇಶಿಸಿ, ಕುಮಾರನನ್ನು ಮಹಿಳೆಯರಿಂದ ಬಿಡಿಸಿ ಕಳುಹಿಸಿದರು. ಘಟನೆಯ ವಿಡಿಯೋ ಅಲ್ಲಿದ್ದ ಸ್ಥಳೀಯರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…