ನಗರದ ಶಾಂತಿನಿಕೇತನ ಕಾಲೋನಿಯ ಲಲಿತಾ ಎಂಬ ಮಹಿಳೆ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ ವೇಳೆ, ಪತಿ ಕಳೆದ ವರ್ಷವೇ ವಿಚ್ಛೇದನ ಪಡೆದಿದ್ದಾನೆ ಎಂಬ ವಿಚಾರ ತಿಳಿದು ಆಕ್ರೋಶಗೊಂಡು, ಕೋರ್ಟ್ ಆವರಣದಲ್ಲೇ ಸಹೋದರಿಯೊಂದಿಗೆ ಸೇರಿ ಪತಿಗೆ ಥಳಿಸಿದ ಘಟನೆ ಸೋಮವಾರ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಲಿತಾ ವಾಯವ್ಯ ಸಾರಿಗೆ ಸಂಸ್ಥೆಯ ನೌಕರನಾದ ಬೆಳಗಾವಿ ಜಿಲ್ಲೆ ರಾಮದುರ್ಗದ ಕುಮಾರನ ವಿರುದ್ಧ ಜೀವನಾಂಶಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದರು. ಆದರೆ, ನ್ಯಾಯಾಲಯದಲ್ಲಿ ಹಾಜರಾಗಿದ್ದಾಗ, ಕುಮಾರ ಕಳೆದ ವರ್ಷ ಜೂನ್ ತಿಂಗಳಲ್ಲೇ ರಾಮದುರ್ಗ ಕೋರ್ಟ್ನಲ್ಲಿ ವಿಚ್ಛೇದನ ಪಡೆದಿರುವುದು ತಿಳಿದುಬಂದಿತು. ಈ ವಿಷಯ ತಿಳಿದ ಲಲಿತಾ, ವಿಚ್ಛೇದನಕ್ಕಾಗಿ ತನ್ನ ನಕಲಿ ಸಹಿಯನ್ನು ಬಳಸಲಾಗಿದೆ ಎಂದು ಆರೋಪಿಸಿ, ತೀವ್ರ ಸಿಟ್ಟಿಗೆದ್ದರು.
ಆಕ್ರೋಶದಲ್ಲಿ, ತಮ್ಮ ಸಹೋದರಿಯೊಂದಿಗೆ ಸೇರಿ ಪತಿಗೆ ಹಲ್ಲೆ ನಡೆಸಿದರು. ಈ ಸಂದರ್ಭ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಮಧ್ಯಪ್ರವೇಶಿಸಿ, ಕುಮಾರನನ್ನು ಮಹಿಳೆಯರಿಂದ ಬಿಡಿಸಿ ಕಳುಹಿಸಿದರು. ಘಟನೆಯ ವಿಡಿಯೋ ಅಲ್ಲಿದ್ದ ಸ್ಥಳೀಯರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ.
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…