ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಹುತೇಕ ಖಚಿತವಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಮೂಲಗಳ ಪ್ರಕಾರ, ಸೋಮವಾರ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಅಧಿಕೃತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬಳಿಕ ಸಂಜೆ ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ತಿಳಿದು ಬಂದಿದೆ.
ಡಿಕೆ ಶಿವಕುಮಾರ್ ಜೊತೆಗೆ ಕೆಲ ಹಿರಿಯ ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ಮೂಲಗಳ ಪ್ರಕಾರ ಏಳು ಮಂದಿ ಹಿರಿಯ ನಾಯಕರು ಮೊದಲ ಹಂತದಲ್ಲಿ ಸಂಪುಟ ಸೇರ್ಪಡೆಯಾಗಲಿದ್ದು, ಇನ್ನೂ ಕೆಲವು ಮೂಲಗಳು 12 ರಿಂದ 13 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಿವೆ.
ಸಂಪುಟ ಸೇರ್ಪಡೆ ಕುರಿತಂತೆ ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆಜೆ ಜಾರ್ಜ್, ಈಶ್ವರ್ ಖಂಡ್ರೆ, ಎಂಬಿ ಪಾಟೀಲ್, ಡಾ.ಜಿ ಪರಮೇಶ್ವರ್, ಎಚ್ ಕೆ ಪಾಟೀಲ್, ಶಿವರಾಜ ತಂಗಡಗಿ, ಕೆ ಎಚ್ ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಡ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಹೆಸರುಗಳು ಕೇಳಿಬರುತ್ತಿವೆ.
ಇದರ ಜೊತೆಗೆ ಡಿಕೆ ಶಿವಕುಮಾರ್ ತಮ್ಮ ಆಪ್ತ ವಲಯದ ಕೆಲ ನಾಯಕರ ಹೆಸರನ್ನೂ ಅಂತಿಮ ಪಟ್ಟಿಯಲ್ಲಿ ಸೇರಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಅನುಮೋದನೆ ನೀಡಿದರೆ 13ಕ್ಕೂ ಹೆಚ್ಚು ಮಂದಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ನಡುವೆ ತೀವ್ರ ಚಟುವಟಿಕೆಗಳು ಆರಂಭವಾಗಿವೆ.
ಇನ್ನೊಂದೆಡೆ, ಹಾಲಿ ಸ್ಪೀಕರ್ ಯುಟಿ ಖಾದರ್ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ. ದಿನೇಶ್ ಗುಂಡೂರಾವ್, ಎಚ್ ಕೆ ಪಾಟೀಲ್ ಅಥವಾ ಡಾ.ಜಿ ಪರಮೇಶ್ವರ್ ಅವರನ್ನು ಮುಂದಿನ ಸ್ಪೀಕರ್ ಆಗಿ ಆಯ್ಕೆ ಮಾಡುವ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.
ಒಟ್ಟಿನಲ್ಲಿ ಸೋಮವಾರ ರಾಜ್ಯ ರಾಜಕೀಯದ ಹಲವು ಕುತೂಹಲಗಳಿಗೆ ತೆರೆ ಬೀಳುವ ನಿರೀಕ್ಷೆ ಇದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ರಾಜ್ಯದ ಹಲವೆಡೆ ಅಭಿಮಾನಿಗಳು ವಿಶೇಷ ಪೂಜೆ ಹಾಗೂ ಹೋಮ ಹವನಗಳನ್ನು ನಡೆಸುತ್ತಿದ್ದಾರೆ.
ಭೀಮಾತೀರ ಪ್ರದೇಶ ಮತ್ತೆ ರಕ್ತದ ಮಡುವಾಗಿ ಮಾರ್ಪಟ್ಟಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ…
ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಕ್ರಿಯೆ ಇದೀಗ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಂಪರ್ಕ ಹೊಂದಿದ್ದರೆಂದು ಆರೋಪಿಸಲ್ಪಟ್ಟ ಕೆಲವು ಸ್ಥಳೀಯ ನಾಯಕರ ವಿರುದ್ಧ ಪೊಲೀಸರು ಕೈಗೊಂಡಿರುವ ಕ್ರಮಗಳು ರಾಜ್ಯ ರಾಜಕೀಯದಲ್ಲಿ…
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ…
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ನಡೆದ ಮಹತ್ವದ ಸಭೆಗೆ ಗೈರಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ…
ಕರ್ನಾಟಕ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಹೊಸ ತಿರುವು ಪಡೆದುಕೊಂಡಿದೆ. “ಐದು ವರ್ಷವೂ ನಾನೇ ಸಿಎಂ” ಎಂದು ಸ್ಪಷ್ಟ ಸಂದೇಶ…