Categories: LatestPolitics

ಡಿಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಸಜ್ಜು: ಸೋಮವಾರ ಪ್ರಮಾಣ ವಚನ, ಹೊಸ ಸಚಿವರ ಪಟ್ಟಿ ಫೈನಲ್?

ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಹುತೇಕ ಖಚಿತವಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಮೂಲಗಳ ಪ್ರಕಾರ, ಸೋಮವಾರ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಅಧಿಕೃತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬಳಿಕ ಸಂಜೆ ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ತಿಳಿದು ಬಂದಿದೆ.

ಡಿಕೆ ಶಿವಕುಮಾರ್ ಜೊತೆಗೆ ಕೆಲ ಹಿರಿಯ ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ಮೂಲಗಳ ಪ್ರಕಾರ ಏಳು ಮಂದಿ ಹಿರಿಯ ನಾಯಕರು ಮೊದಲ ಹಂತದಲ್ಲಿ ಸಂಪುಟ ಸೇರ್ಪಡೆಯಾಗಲಿದ್ದು, ಇನ್ನೂ ಕೆಲವು ಮೂಲಗಳು 12 ರಿಂದ 13 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಿವೆ.

ಸಂಪುಟ ಸೇರ್ಪಡೆ ಕುರಿತಂತೆ ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆಜೆ ಜಾರ್ಜ್, ಈಶ್ವರ್ ಖಂಡ್ರೆ, ಎಂಬಿ ಪಾಟೀಲ್, ಡಾ.ಜಿ ಪರಮೇಶ್ವರ್, ಎಚ್ ಕೆ ಪಾಟೀಲ್, ಶಿವರಾಜ ತಂಗಡಗಿ, ಕೆ ಎಚ್ ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಡ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಹೆಸರುಗಳು ಕೇಳಿಬರುತ್ತಿವೆ.

ಇದರ ಜೊತೆಗೆ ಡಿಕೆ ಶಿವಕುಮಾರ್ ತಮ್ಮ ಆಪ್ತ ವಲಯದ ಕೆಲ ನಾಯಕರ ಹೆಸರನ್ನೂ ಅಂತಿಮ ಪಟ್ಟಿಯಲ್ಲಿ ಸೇರಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಅನುಮೋದನೆ ನೀಡಿದರೆ 13ಕ್ಕೂ ಹೆಚ್ಚು ಮಂದಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ನಡುವೆ ತೀವ್ರ ಚಟುವಟಿಕೆಗಳು ಆರಂಭವಾಗಿವೆ.

ಇನ್ನೊಂದೆಡೆ, ಹಾಲಿ ಸ್ಪೀಕರ್ ಯುಟಿ ಖಾದರ್ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ. ದಿನೇಶ್ ಗುಂಡೂರಾವ್, ಎಚ್ ಕೆ ಪಾಟೀಲ್ ಅಥವಾ ಡಾ.ಜಿ ಪರಮೇಶ್ವರ್ ಅವರನ್ನು ಮುಂದಿನ ಸ್ಪೀಕರ್ ಆಗಿ ಆಯ್ಕೆ ಮಾಡುವ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.

ಒಟ್ಟಿನಲ್ಲಿ ಸೋಮವಾರ ರಾಜ್ಯ ರಾಜಕೀಯದ ಹಲವು ಕುತೂಹಲಗಳಿಗೆ ತೆರೆ ಬೀಳುವ ನಿರೀಕ್ಷೆ ಇದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ರಾಜ್ಯದ ಹಲವೆಡೆ ಅಭಿಮಾನಿಗಳು ವಿಶೇಷ ಪೂಜೆ ಹಾಗೂ ಹೋಮ ಹವನಗಳನ್ನು ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

7 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

7 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

7 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

8 hours ago

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

11 hours ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

1 day ago