Categories: LatestPolitics

ಡಿಕೆಶಿ ಮೊದಲ ಕ್ಯಾಬಿನೆಟ್‌ ಸಭೆಯಲ್ಲೇ 6 ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌, 56 ಸಾವಿರ ಹುದ್ದೆ ಭರ್ತಿ, ಬಿ ಖಾತಾಗೆ ಎ ಖಾತಾ!

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಯುವಕರು, ವಿದ್ಯಾರ್ಥಿಗಳು, ನಿರುದ್ಯೋಗಿಗಳು ಹಾಗೂ ಆಸ್ತಿ ಮಾಲೀಕರಿಗೆ ಅನುಕೂಲವಾಗುವ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. “ಯುವ ಯುಗ” ಆರಂಭಿಸುವುದಾಗಿ ಘೋಷಿಸಿದ್ದ ಡಿಕೆಶಿ, ಒಟ್ಟು ಆರು ಪ್ರಮುಖ ಯೋಜನೆಗಳಿಗೆ ಸಚಿವ ಸಂಪುಟದ ಅನುಮೋದನೆ ಪಡೆದಿದ್ದಾರೆ.

ವಿದ್ಯಾರ್ಥಿ ಬಾಲಕರಿಗೂ ಉಚಿತ ಬಸ್‌ ಪ್ರಯಾಣ

ರಾಜ್ಯದಲ್ಲಿ ಈಗಾಗಲೇ ಶಕ್ತಿ ಯೋಜನೆಯಡಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ದೊರೆಯುತ್ತಿದೆ. ಇದೀಗ ಇದೇ ಸೌಲಭ್ಯವನ್ನು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿ ಬಾಲಕರಿಗೂ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಸುಮಾರು 10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸಲಾಗಲಿದ್ದು, ಇದಕ್ಕಾಗಿ ಸರ್ಕಾರ ವಾರ್ಷಿಕವಾಗಿ ಸುಮಾರು 1,700 ಕೋಟಿ ರೂ. ವೆಚ್ಚ ಮಾಡಲಿದೆ.

10 ಸಾವಿರ ಭಾರತ್‌ ಜೋಡೋ ಯುವ ಸಂಘಗಳ ರಚನೆ

ಯುವಕರಲ್ಲಿ ನಾಯಕತ್ವ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯದಾದ್ಯಂತ 10 ಸಾವಿರ “ಭಾರತ್‌ ಜೋಡೋ ಯುವ ಸಂಘ”ಗಳನ್ನು ರಚಿಸಲು ತೀರ್ಮಾನಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 150 ರಿಂದ 200 ಯುವಕರನ್ನೊಳಗೊಂಡ ಒಂದು ಸಂಘ ರಚನೆಯಾಗಲಿದೆ. ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂ. ನೆರವು ನೀಡಲಾಗುತ್ತಿದ್ದು, ಒಟ್ಟು 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ವೇಳಾಪಟ್ಟಿ

ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮಹತ್ವದ ಹೆಜ್ಜೆಯಾಗಿ 56,432 ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಲಾದ ನೇಮಕಾತಿ ಪ್ರಕ್ರಿಯೆಗಳಿಗೆ ವೇಗ ನೀಡುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದು, ಮುಂದಿನ ಸಚಿವ ಸಂಪುಟ ಸಭೆಯೊಳಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸುವಂತೆ ಆದೇಶಿಸಿದ್ದಾರೆ.

ಸರ್ಕಾರದ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ

ಖಾಸಗಿ ವಲಯದ ಉದ್ಯೋಗ ಅವಕಾಶಗಳನ್ನು ನಿರುದ್ಯೋಗಿ ಯುವಕರಿಗೆ ಸಂಪರ್ಕಿಸುವ ಉದ್ದೇಶದಿಂದ ಸರ್ಕಾರ ಪ್ರಾಯೋಜಿತ ಉದ್ಯೋಗ ವಿನಿಮಯ ಕೇಂದ್ರವನ್ನು ಆರಂಭಿಸಲು ನಿರ್ಧರಿಸಲಾಗಿದೆ. ಖಾಸಗಿ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ತರಬೇತಿ ನೀಡುವ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಯೋಜನೆಯ ರೂಪುರೇಷೆ ಸಿದ್ಧಪಡಿಸಲು ಮೂವರು ಸಚಿವರ ಸಮಿತಿಯನ್ನು ರಚಿಸಲಾಗುತ್ತಿದೆ.

ಒಸಿ-ಸಿಸಿ ಇಲ್ಲದ ಕಟ್ಟಡಗಳಿಗೂ ನೀರು ಮತ್ತು ವಿದ್ಯುತ್‌ ಸಂಪರ್ಕ

ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದ್ದ ಒಸಿ (Occupancy Certificate) ಮತ್ತು ಸಿಸಿ (Completion Certificate) ವಿನಾಯಿತಿ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲಾಗಿದೆ. 2026ರ ಮೇ 31ರೊಳಗೆ ನಿರ್ಮಾಣಗೊಂಡಿರುವ 2,500 ಚದರ ಅಡಿ ವಿಸ್ತೀರ್ಣದ ನಿವೇಶನಗಳಲ್ಲಿ ಮೂರು ಅಂತಸ್ತಿನವರೆಗಿನ ಕಟ್ಟಡಗಳಿಗೆ ಒಸಿ-ಸಿಸಿ ಇಲ್ಲದಿದ್ದರೂ ನೀರು ಮತ್ತು ವಿದ್ಯುತ್‌ ಸಂಪರ್ಕ ನೀಡಲು ಸರ್ಕಾರ ನಿರ್ಧರಿಸಿದೆ.

ಬಿ ಖಾತಾ ಆಸ್ತಿಗಳಿಗೆ ರಾಜ್ಯಾದ್ಯಂತ ಎ ಖಾತಾ

ಬೆಂಗಳೂರು ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡುವ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಗೂ ವಿಸ್ತರಿಸಲಾಗಿದೆ. ಅಗತ್ಯ ದಾಖಲೆಗಳನ್ನು ಹೊಂದಿರುವ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲಾಗುವುದು. ಈ ಕ್ರಮದಿಂದ ಲಕ್ಷಾಂತರ ಆಸ್ತಿ ಮಾಲೀಕರು ದಾಖಲೆ ಸಮಸ್ಯೆಯಿಂದ ಮುಕ್ತಿ ಪಡೆಯುವ ನಿರೀಕ್ಷೆಯಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಡಿ.ಕೆ. ಶಿವಕುಮಾರ್‌ ಅವರು ತೆಗೆದುಕೊಂಡಿರುವ ಈ ನಿರ್ಧಾರಗಳು ವಿದ್ಯಾರ್ಥಿಗಳು, ಯುವಕರು, ನಿರುದ್ಯೋಗಿಗಳು ಹಾಗೂ ಆಸ್ತಿ ಮಾಲೀಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಪ್ರಯತ್ನವೆಂದು ವಿಶ್ಲೇಷಿಸಲಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

1 hour ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

19 hours ago

ಗುಡಿಗೇರಿಯಲ್ಲಿ ಅಕ್ರಮ ಮಟ್ಕಾ ದಂಧೆ ಮೇಲೆ ಪೊಲೀಸರ ದಾಳಿ; ಓಸಿ ಬರೆಯುತ್ತಿದ್ದ ಆರೋಪಿ ಬಂಧನ

ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಕೆಳಗಿನ ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಮಟ್ಕಾ (ಓಸಿ) ಸಂಖ್ಯೆಗಳನ್ನು ಬರೆಯುತ್ತಿದ್ದ…

19 hours ago

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಅಸಭ್ಯ ವರ್ತನೆ: ಕಾಮುಕನಿಗೆ ಪ್ರಯಾಣಿಕರಿಂದ ಧರ್ಮದೇಟು, ಪೊಲೀಸರ ವಶಕ್ಕೆ

ಬೆಂಗಳೂರು: ಮಹಿಳೆಯರ ಸುರಕ್ಷತೆಗೆ ಸವಾಲೊಡ್ಡುವ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೆಬ್ಬಾಳದಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆಗೆ ತೆರಳುತ್ತಿದ್ದ…

19 hours ago

ಅನುಮಾನದ ಕಾಟಕ್ಕೆ ಯುವ ಗೃಹಿಣಿ ಬಲಿ? ಬಿ.ಎಸ್‌ಸಿ ಪದವೀಧರೆ ಪ್ರೇರಣಾ ಸಾವಿನ ಹಿಂದೆ ಪತಿ ಕಿರುಕುಳದ ಆರೋಪ

ಬೆಂಗಳೂರು: ಪತಿಯ ನಿರಂತರ ಅನುಮಾನ ಮತ್ತು ಕಿರುಕುಳದಿಂದ ಬೇಸತ್ತ ಯುವ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪದ ಘಟನೆ ಬೆಂಗಳೂರಿನ ಇಂದಿರಾನಗರ…

19 hours ago

ಫೇಸ್‌ಬುಕ್ ಸ್ನೇಹದ ಬಲೆ: ಖಾಸಗಿ ಫೋಟೋಗಳಿಂದ ಬ್ಲ್ಯಾಕ್‌ಮೇಲ್, ದಂಪತಿ ಪೊಲೀಸ್ ಬಲೆಗೆ!

ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ಬೆಳೆಸುವ ಸ್ನೇಹ ಕೆಲವೊಮ್ಮೆ ಎಷ್ಟೊಂದು ಅಪಾಯಕಾರಿಯಾಗಬಹುದು ಎಂಬುದಕ್ಕೆ ಹಾವೇರಿಯಲ್ಲಿ ನಡೆದಿರುವ ಈ ಘಟನೆ ಉದಾಹರಣೆಯಾಗಿದೆ. ಫೇಸ್‌ಬುಕ್‌ನಲ್ಲಿ…

19 hours ago