ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ನಡೆದ ಮಹತ್ವದ ಸಭೆಗೆ ಗೈರಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪದಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ 3 ಉಪಾಧ್ಯಕ್ಷರು ಹಾಗೂ 29 ಪ್ರಧಾನ ಕಾರ್ಯದರ್ಶಿಗಳನ್ನು ಹುದ್ದೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮೇ 24ರಂದು ಬೆಂಗಳೂರಿನ ಹೊರವಲಯದಲ್ಲಿ ಎಸ್ಐಆರ್ ಪ್ರಕ್ರಿಯೆ, ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಪಕ್ಷ ಸಂಘಟನೆ ಕುರಿತು ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಆದರೆ, ಹಲವು ಪ್ರಮುಖ ಪದಾಧಿಕಾರಿಗಳು ಸಭೆಗೆ ಗೈರಾಗಿದ್ದ ಹಿನ್ನೆಲೆ ಪಕ್ಷದ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.
ವಜಾಗೊಂಡ ಉಪಾಧ್ಯಕ್ಷರಲ್ಲಿ ದಾವಣಗೆರೆಯ ಕೆ. ಶಿವಮೂರ್ತಿ, ಕಲಬುರಗಿಯ ಬಾಬುರಾವ್ ಜಗೀರ್ದಾರ್ ಹಾಗೂ ಬೆಂಗಳೂರಿನ ಎಂಸಿ ವೇಣುಗೋಪಾಲ್ ಸೇರಿದ್ದಾರೆ.
ಇದೇ ವೇಳೆ ಪ್ರಧಾನ ಕಾರ್ಯದರ್ಶಿಗಳಾದ ನಿಕೇತ್ ರಾಜ್ ಮೌರ್ಯ, ನಟಿ ಭಾವನಾ ರಾಮಣ್ಣ, ಕೆಸಿ ಪ್ರಭಾಕರ್ ರೆಡ್ಡಿ, ತಿಬ್ಬೇಗೌಡ, ಜುಲ್ಫಿಕರ್ ಅಹ್ಮದ್, ಶಂಕರ್ ದೊಡ್ಡಿ, ರೇಖಾ ಹುಲಿಯಪ್ಪ, ಎಚ್ಎ ಷಣ್ಮುಗಪ್ಪ, ಎಂ ರಾಮಪ್ಪ, ಷಣ್ಮುಗಪ್ಪ ಶಿವಳ್ಳಿ, ಸಿಆರ್ ಮನೋಹರ್, ಎಚ್ಆರ್ ಶ್ರೀನಾಥ್, ನಾಗೇಶ್ವರ್ ರಾವ್ ಸೇರಿದಂತೆ ಒಟ್ಟು 29 ಮಂದಿಯನ್ನು ಹುದ್ದೆಯಿಂದ ತೆರವುಗೊಳಿಸಲಾಗಿದೆ.
ಪಕ್ಷದ ಸಭೆಗೆ ಗೈರಾಗಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ನೀಡಿದ್ದರು. ಅವರ ಸೂಚನೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ಮಹತ್ವದ ಕ್ರಮ ಜರುಗಿಸಿದ್ದಾರೆ.
ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದ ಒಳಾಂಗಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಶಿಸ್ತು ಕ್ರಮಗಳ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಂಪರ್ಕ ಹೊಂದಿದ್ದರೆಂದು ಆರೋಪಿಸಲ್ಪಟ್ಟ ಕೆಲವು ಸ್ಥಳೀಯ ನಾಯಕರ ವಿರುದ್ಧ ಪೊಲೀಸರು ಕೈಗೊಂಡಿರುವ ಕ್ರಮಗಳು ರಾಜ್ಯ ರಾಜಕೀಯದಲ್ಲಿ…
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ…
ಕರ್ನಾಟಕ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಹೊಸ ತಿರುವು ಪಡೆದುಕೊಂಡಿದೆ. “ಐದು ವರ್ಷವೂ ನಾನೇ ಸಿಎಂ” ಎಂದು ಸ್ಪಷ್ಟ ಸಂದೇಶ…
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಪತಿ ಹತ್ಯೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದು ಭಾರೀ ಸಂಚಲನ ಮೂಡಿಸಿದೆ. ಅನೈತಿಕ ಸಂಬಂಧಕ್ಕೆ…
ಶಿರಸಿ: ಮೇ 24ರ ನಸುಕಿನ ಜಾವ ಸುರಿದ ಭಾರೀ ಮಳೆಯಿಂದ ನಗರದ ಗಣೇಶನಗರ ಎರಡನೇ ವಾರ್ಡ್ನಲ್ಲಿ ರಸ್ತೆ ಸಂಪೂರ್ಣ ಕುಸಿದು…
ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ…