ತಮಿಳುನಾಡಿನ ನಿರುದ್ಯೋಗಿಯೋರ್ವ ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್ ಪ್ಲಾನ್ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ತಮಿಳುನಾಡಿನ ನಿರುದ್ಯೋಗಿಯೋರ್ವ
ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್ ಪ್ಲಾನ್ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ಈತ ಮಾಡಿದ ಕೆಲಸಕ್ಕೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂರು ಹೊತ್ತು ಊಟ, ಆರಾಮ ಜೀವನ ನಡೆಸಲು ಜೈಲು ಒಂದು ಉತ್ತಮ ತಾಣ ಎಂದು ಯೋಚಿಸಿದ್ದ ತಮಿಳುನಾಡು ಮೂಲದ 34 ವರ್ಷದ ಸಂತೋಷ್ ಕುಮಾರ್ , ತಾನು ಹೇಗಾದರೂ ಪೊಲೀಸರ ಕೈಯಲ್ಲಿ ಬಂಧಿಯಾಗಬೇಕೆಂದು ಹಲವು ದಿನಗಳ ನಂತರ ಪ್ಲಾನ್ ಮಾಡಿ, ಇದೀಗಾ ಪೊಲೀಸರ ಅತಿಥಿಯಾಗಿದ್ದಾನೆ. ಅಷ್ಟಕ್ಕೂ ಈತ ಮಾಡಿದ ಕೆಲಸ ಏನು ಗೊತ್ತಾ?
ತಮಿಳುನಾಡಿನ ಕೊಯಂಬತ್ತೂರಿನ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಈತ ಚೆನ್ನೈನ ಕಂಟ್ರೋಲ್ ರೂಮ್ಗೆ ಕರೆ ಮಾಡಿದ್ದಾನೆ. ಬಾಂಬ್ ಸ್ಫೋಟದ ಬಗ್ಗೆ ಸುಳ್ಳು ಸುದ್ದಿ ಹರಡಿಸಿರುವುದರಿಂದ ಶನಿವಾರ ಇತನನ್ನು ಬಂಧಿಸಲಾಗಿದೆ.
ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು 507 ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆರೋಪಿಯ ವಿಚಾರಣೆಯ ನಂತರ, ಶಂಕಿತನು ತಾನು ನಿರುದ್ಯೋಗಿ ಮತ್ತು ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವುದನ್ನು ವಿವರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…