ತಮಿಳುನಾಡಿನ ನಿರುದ್ಯೋಗಿಯೋರ್ವ ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್ ಪ್ಲಾನ್ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ತಮಿಳುನಾಡಿನ ನಿರುದ್ಯೋಗಿಯೋರ್ವ
ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್ ಪ್ಲಾನ್ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ಈತ ಮಾಡಿದ ಕೆಲಸಕ್ಕೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂರು ಹೊತ್ತು ಊಟ, ಆರಾಮ ಜೀವನ ನಡೆಸಲು ಜೈಲು ಒಂದು ಉತ್ತಮ ತಾಣ ಎಂದು ಯೋಚಿಸಿದ್ದ ತಮಿಳುನಾಡು ಮೂಲದ 34 ವರ್ಷದ ಸಂತೋಷ್ ಕುಮಾರ್ , ತಾನು ಹೇಗಾದರೂ ಪೊಲೀಸರ ಕೈಯಲ್ಲಿ ಬಂಧಿಯಾಗಬೇಕೆಂದು ಹಲವು ದಿನಗಳ ನಂತರ ಪ್ಲಾನ್ ಮಾಡಿ, ಇದೀಗಾ ಪೊಲೀಸರ ಅತಿಥಿಯಾಗಿದ್ದಾನೆ. ಅಷ್ಟಕ್ಕೂ ಈತ ಮಾಡಿದ ಕೆಲಸ ಏನು ಗೊತ್ತಾ?
ತಮಿಳುನಾಡಿನ ಕೊಯಂಬತ್ತೂರಿನ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಈತ ಚೆನ್ನೈನ ಕಂಟ್ರೋಲ್ ರೂಮ್ಗೆ ಕರೆ ಮಾಡಿದ್ದಾನೆ. ಬಾಂಬ್ ಸ್ಫೋಟದ ಬಗ್ಗೆ ಸುಳ್ಳು ಸುದ್ದಿ ಹರಡಿಸಿರುವುದರಿಂದ ಶನಿವಾರ ಇತನನ್ನು ಬಂಧಿಸಲಾಗಿದೆ.
ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು 507 ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆರೋಪಿಯ ವಿಚಾರಣೆಯ ನಂತರ, ಶಂಕಿತನು ತಾನು ನಿರುದ್ಯೋಗಿ ಮತ್ತು ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವುದನ್ನು ವಿವರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…