ತಮಿಳುನಾಡಿನ ನಿರುದ್ಯೋಗಿಯೋರ್ವ ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್ ಪ್ಲಾನ್ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ತಮಿಳುನಾಡಿನ ನಿರುದ್ಯೋಗಿಯೋರ್ವ
ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್ ಪ್ಲಾನ್ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ಈತ ಮಾಡಿದ ಕೆಲಸಕ್ಕೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂರು ಹೊತ್ತು ಊಟ, ಆರಾಮ ಜೀವನ ನಡೆಸಲು ಜೈಲು ಒಂದು ಉತ್ತಮ ತಾಣ ಎಂದು ಯೋಚಿಸಿದ್ದ ತಮಿಳುನಾಡು ಮೂಲದ 34 ವರ್ಷದ ಸಂತೋಷ್ ಕುಮಾರ್ , ತಾನು ಹೇಗಾದರೂ ಪೊಲೀಸರ ಕೈಯಲ್ಲಿ ಬಂಧಿಯಾಗಬೇಕೆಂದು ಹಲವು ದಿನಗಳ ನಂತರ ಪ್ಲಾನ್ ಮಾಡಿ, ಇದೀಗಾ ಪೊಲೀಸರ ಅತಿಥಿಯಾಗಿದ್ದಾನೆ. ಅಷ್ಟಕ್ಕೂ ಈತ ಮಾಡಿದ ಕೆಲಸ ಏನು ಗೊತ್ತಾ?
ತಮಿಳುನಾಡಿನ ಕೊಯಂಬತ್ತೂರಿನ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಈತ ಚೆನ್ನೈನ ಕಂಟ್ರೋಲ್ ರೂಮ್ಗೆ ಕರೆ ಮಾಡಿದ್ದಾನೆ. ಬಾಂಬ್ ಸ್ಫೋಟದ ಬಗ್ಗೆ ಸುಳ್ಳು ಸುದ್ದಿ ಹರಡಿಸಿರುವುದರಿಂದ ಶನಿವಾರ ಇತನನ್ನು ಬಂಧಿಸಲಾಗಿದೆ.
ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು 507 ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆರೋಪಿಯ ವಿಚಾರಣೆಯ ನಂತರ, ಶಂಕಿತನು ತಾನು ನಿರುದ್ಯೋಗಿ ಮತ್ತು ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವುದನ್ನು ವಿವರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…