ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಮೇಲೆ ಇದೀಗ ಜೀವ ಬೆದರಿಕೆ ಕೇಸ್ ದಾಖಲಾಗಿದೆ. ಖಾಸಗಿ ವಾಹಿನಿಯಲ್ಲಿ ಕಾಮಿಡಿಯನ್ ಆಗಿ ಕೆಲಸ ಮಾಡುತ್ತಿರುವ ಸೋಮಶೇಖರ್ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಗೂ ತಮ್ಮ ಕುಟಂಬಕ್ಕೂ ಜೀವ ಬೆದರಿಕೆ ಇದೆ, ಅವರನ್ನು ಕರೆಸಿ ಎಚ್ಚರಿಕೆ ಕೊಡಿ ಎಂದು ಮನವಿ ಮಾಡಿದ್ದಾರೆ.
ಖಾಸಗಿ ಚಾನೆಲ್ ನಲ್ಲಿ ನಡೆದ ಕಾಮಿಡಿ ಗ್ಯಾಂಗ್ ಕಾರ್ಯಕ್ರಮದಿಂದ ಸೋಮಶೇಖರ್ ಅವರಿಗೆ ಒಂದಷ್ಟು ಹಣ ಬಂದಿತ್ತಂತೆ. ಆ ಹಣವನ್ನು ಸೀನಿಯರ್ ಗಳಾದ ಚಿದಾನಂದ್ ಹಾಗೂ ಅನಿ ಎನ್ನುವವರಿಗೂ ನೀಡಿ ಎಂದು ಕೇಳಿದ್ದರೆಂತೆ. ಅದಕ್ಕೆ ಒಪ್ಪದ ಸೋಮಶೇಖರ್ ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಿಸಿರುವ ಸೋಮಶೇಖರ್, ನಯನಾ ಮಾತನಾಡಿರುವ ಆಡಿಯೋ ಕೂಡ ನೀಡಿದ್ದಾರೆ.
ಆಡಿಯೋ : ಹಾಯ್ ಸೋಮ.. ನಾನು ಈ ಆಡಿಯೋವನ್ನು ನಮ್ಮ ಏರಿಯಾದ ಆರ್ ಆರ್ ನಗರ ಪೊಲೀಸ್ ಠಾಣೆಯಿಂದ ಕಳುಹಿಸುತ್ತಿದ್ದೇನೆ. ಚಿದುಗೆ ಮತ್ತು ಅನಿಗೆ ನೀನು ಹಣ ಕೊಟ್ಟಿಲ್ಲವಂತೆ. ಅವರಿಗೆ ಹಣ ನೀಡದೆ ಹೋದರೆ ಪೊಲೀಸರಿಗೆ ದೂರು ನೀಡುತ್ತೇವೆ. ಆಮೇಲೆ ಅವರೇ ನೀನು ಎಲ್ಲಿ ಇದ್ದರು ಎಳೆದು ತರುತ್ತಾರೆ. ಆ ಹಣ ಎಲ್ಲರಿಗೂ ಸೇರಿದ್ದು. ಆದ್ರೆ ನೀನು ನಿನ್ನ ಲುಚ್ಚಾ ಬುದ್ದಿಯನ್ನು ತೋರಿಸಿದ್ದೀಯಾ. ದಯವಿಟ್ಟು ಆದಷ್ಟು ಬೇಗ ದುಡ್ಡು ತಲುಪಿಸು ಇಲ್ಲವಾದರೆ ನಾವೂ ಏನು ಮಾಡುವುದಕ್ಕೂ ಹೇಸುವುದಿಲ್ಲ. ಮಿಸ್ಟರ್ ಸೋಮ ಅವರೇ ಅದೇನೋ ರೂಲ್ಸ್ ಬಗ್ಗೆ ಎಲ್ಲಾ ಮಾತಾಡಿದ್ರಂತೆ. ಹೋಗಿ ಅದ್ಯಾವ ಪೊಲೀಸ್ ಸ್ಟೇಷನ್ ಗೆ ಹೋಗುತ್ತೀರಾ ಹೋಗಿ. ಅದೇನು ದೂರು ಕೊಡ್ತೀರಾ ಕೊಡಿ. ನಿಮಗಿದು ಲಾಸ್ಟ್ ಕಾಲ್, ಇನ್ಮೇಲೆ ಬೆಂಗಳೂರಿನಲ್ಲಿ ಅದೇಗೆ ಓಡಾಡ್ತೀಯಾ ಅನ್ನೋದನ್ನ ನಾನು ನೋಡ್ತೀನಿ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…