Latest

ಬೆಂಗಳೂರಿನಲ್ಲಿ ಅದೆಂಗೆ ಓಡಾಡುತ್ತೀಯಾ ನೋಡ್ತೀನಿ: ಕಲಾವಿದನಿಗೆ ಧಮ್ಕಿ ನಯನಾ

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಮೇಲೆ ಇದೀಗ ಜೀವ ಬೆದರಿಕೆ ಕೇಸ್ ದಾಖಲಾಗಿದೆ. ಖಾಸಗಿ ವಾಹಿನಿಯಲ್ಲಿ ಕಾಮಿಡಿಯನ್ ಆಗಿ ಕೆಲಸ ಮಾಡುತ್ತಿರುವ ಸೋಮಶೇಖರ್ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಗೂ ತಮ್ಮ ಕುಟಂಬಕ್ಕೂ ಜೀವ ಬೆದರಿಕೆ ಇದೆ, ಅವರನ್ನು ಕರೆಸಿ ಎಚ್ಚರಿಕೆ ಕೊಡಿ ಎಂದು ಮನವಿ ಮಾಡಿದ್ದಾರೆ.
ಖಾಸಗಿ ಚಾನೆಲ್ ನಲ್ಲಿ ನಡೆದ ಕಾಮಿಡಿ ಗ್ಯಾಂಗ್ ಕಾರ್ಯಕ್ರಮದಿಂದ ಸೋಮಶೇಖರ್ ಅವರಿಗೆ ಒಂದಷ್ಟು ಹಣ ಬಂದಿತ್ತಂತೆ. ಆ ಹಣವನ್ನು ಸೀನಿಯರ್ ಗಳಾದ ಚಿದಾನಂದ್ ಹಾಗೂ ಅನಿ ಎನ್ನುವವರಿಗೂ ನೀಡಿ ಎಂದು ಕೇಳಿದ್ದರೆಂತೆ. ಅದಕ್ಕೆ ಒಪ್ಪದ ಸೋಮಶೇಖರ್ ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಿಸಿರುವ ಸೋಮಶೇಖರ್, ನಯನಾ ಮಾತನಾಡಿರುವ ಆಡಿಯೋ ಕೂಡ ನೀಡಿದ್ದಾರೆ.
ಆಡಿಯೋ : ಹಾಯ್ ಸೋಮ.. ನಾನು ಈ ಆಡಿಯೋವನ್ನು ನಮ್ಮ ಏರಿಯಾದ ಆರ್ ಆರ್ ನಗರ ಪೊಲೀಸ್ ಠಾಣೆಯಿಂದ ಕಳುಹಿಸುತ್ತಿದ್ದೇನೆ. ಚಿದುಗೆ ಮತ್ತು ಅನಿಗೆ ನೀನು ಹಣ ಕೊಟ್ಟಿಲ್ಲವಂತೆ. ಅವರಿಗೆ ಹಣ ನೀಡದೆ ಹೋದರೆ ಪೊಲೀಸರಿಗೆ ದೂರು ನೀಡುತ್ತೇವೆ. ಆಮೇಲೆ ಅವರೇ ನೀನು ಎಲ್ಲಿ ಇದ್ದರು ಎಳೆದು ತರುತ್ತಾರೆ. ಆ ಹಣ ಎಲ್ಲರಿಗೂ ಸೇರಿದ್ದು. ಆದ್ರೆ ನೀನು ನಿನ್ನ ಲುಚ್ಚಾ ಬುದ್ದಿಯನ್ನು ತೋರಿಸಿದ್ದೀಯಾ. ದಯವಿಟ್ಟು ಆದಷ್ಟು ಬೇಗ ದುಡ್ಡು ತಲುಪಿಸು ಇಲ್ಲವಾದರೆ ನಾವೂ ಏನು ಮಾಡುವುದಕ್ಕೂ ಹೇಸುವುದಿಲ್ಲ. ಮಿಸ್ಟರ್ ಸೋಮ ಅವರೇ ಅದೇನೋ ರೂಲ್ಸ್ ಬಗ್ಗೆ ಎಲ್ಲಾ ಮಾತಾಡಿದ್ರಂತೆ. ಹೋಗಿ ಅದ್ಯಾವ ಪೊಲೀಸ್ ಸ್ಟೇಷನ್ ಗೆ ಹೋಗುತ್ತೀರಾ ಹೋಗಿ. ಅದೇನು ದೂರು ಕೊಡ್ತೀರಾ ಕೊಡಿ. ನಿಮಗಿದು ಲಾಸ್ಟ್ ಕಾಲ್, ಇನ್ಮೇಲೆ ಬೆಂಗಳೂರಿನಲ್ಲಿ ಅದೇಗೆ ಓಡಾಡ್ತೀಯಾ ಅನ್ನೋದನ್ನ ನಾನು ನೋಡ್ತೀನಿ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

27 seconds ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

2 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago