Latest

ಬೆಂಗಳೂರಿನಲ್ಲಿ ಅದೆಂಗೆ ಓಡಾಡುತ್ತೀಯಾ ನೋಡ್ತೀನಿ: ಕಲಾವಿದನಿಗೆ ಧಮ್ಕಿ ನಯನಾ

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಮೇಲೆ ಇದೀಗ ಜೀವ ಬೆದರಿಕೆ ಕೇಸ್ ದಾಖಲಾಗಿದೆ. ಖಾಸಗಿ ವಾಹಿನಿಯಲ್ಲಿ ಕಾಮಿಡಿಯನ್ ಆಗಿ ಕೆಲಸ ಮಾಡುತ್ತಿರುವ ಸೋಮಶೇಖರ್ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಗೂ ತಮ್ಮ ಕುಟಂಬಕ್ಕೂ ಜೀವ ಬೆದರಿಕೆ ಇದೆ, ಅವರನ್ನು ಕರೆಸಿ ಎಚ್ಚರಿಕೆ ಕೊಡಿ ಎಂದು ಮನವಿ ಮಾಡಿದ್ದಾರೆ.
ಖಾಸಗಿ ಚಾನೆಲ್ ನಲ್ಲಿ ನಡೆದ ಕಾಮಿಡಿ ಗ್ಯಾಂಗ್ ಕಾರ್ಯಕ್ರಮದಿಂದ ಸೋಮಶೇಖರ್ ಅವರಿಗೆ ಒಂದಷ್ಟು ಹಣ ಬಂದಿತ್ತಂತೆ. ಆ ಹಣವನ್ನು ಸೀನಿಯರ್ ಗಳಾದ ಚಿದಾನಂದ್ ಹಾಗೂ ಅನಿ ಎನ್ನುವವರಿಗೂ ನೀಡಿ ಎಂದು ಕೇಳಿದ್ದರೆಂತೆ. ಅದಕ್ಕೆ ಒಪ್ಪದ ಸೋಮಶೇಖರ್ ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಿಸಿರುವ ಸೋಮಶೇಖರ್, ನಯನಾ ಮಾತನಾಡಿರುವ ಆಡಿಯೋ ಕೂಡ ನೀಡಿದ್ದಾರೆ.
ಆಡಿಯೋ : ಹಾಯ್ ಸೋಮ.. ನಾನು ಈ ಆಡಿಯೋವನ್ನು ನಮ್ಮ ಏರಿಯಾದ ಆರ್ ಆರ್ ನಗರ ಪೊಲೀಸ್ ಠಾಣೆಯಿಂದ ಕಳುಹಿಸುತ್ತಿದ್ದೇನೆ. ಚಿದುಗೆ ಮತ್ತು ಅನಿಗೆ ನೀನು ಹಣ ಕೊಟ್ಟಿಲ್ಲವಂತೆ. ಅವರಿಗೆ ಹಣ ನೀಡದೆ ಹೋದರೆ ಪೊಲೀಸರಿಗೆ ದೂರು ನೀಡುತ್ತೇವೆ. ಆಮೇಲೆ ಅವರೇ ನೀನು ಎಲ್ಲಿ ಇದ್ದರು ಎಳೆದು ತರುತ್ತಾರೆ. ಆ ಹಣ ಎಲ್ಲರಿಗೂ ಸೇರಿದ್ದು. ಆದ್ರೆ ನೀನು ನಿನ್ನ ಲುಚ್ಚಾ ಬುದ್ದಿಯನ್ನು ತೋರಿಸಿದ್ದೀಯಾ. ದಯವಿಟ್ಟು ಆದಷ್ಟು ಬೇಗ ದುಡ್ಡು ತಲುಪಿಸು ಇಲ್ಲವಾದರೆ ನಾವೂ ಏನು ಮಾಡುವುದಕ್ಕೂ ಹೇಸುವುದಿಲ್ಲ. ಮಿಸ್ಟರ್ ಸೋಮ ಅವರೇ ಅದೇನೋ ರೂಲ್ಸ್ ಬಗ್ಗೆ ಎಲ್ಲಾ ಮಾತಾಡಿದ್ರಂತೆ. ಹೋಗಿ ಅದ್ಯಾವ ಪೊಲೀಸ್ ಸ್ಟೇಷನ್ ಗೆ ಹೋಗುತ್ತೀರಾ ಹೋಗಿ. ಅದೇನು ದೂರು ಕೊಡ್ತೀರಾ ಕೊಡಿ. ನಿಮಗಿದು ಲಾಸ್ಟ್ ಕಾಲ್, ಇನ್ಮೇಲೆ ಬೆಂಗಳೂರಿನಲ್ಲಿ ಅದೇಗೆ ಓಡಾಡ್ತೀಯಾ ಅನ್ನೋದನ್ನ ನಾನು ನೋಡ್ತೀನಿ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

13 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

13 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

16 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

16 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

16 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

16 hours ago