Latest

ಬೆಂಗಳೂರಿನಲ್ಲಿ ಅದೆಂಗೆ ಓಡಾಡುತ್ತೀಯಾ ನೋಡ್ತೀನಿ: ಕಲಾವಿದನಿಗೆ ಧಮ್ಕಿ ನಯನಾ

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಮೇಲೆ ಇದೀಗ ಜೀವ ಬೆದರಿಕೆ ಕೇಸ್ ದಾಖಲಾಗಿದೆ. ಖಾಸಗಿ ವಾಹಿನಿಯಲ್ಲಿ ಕಾಮಿಡಿಯನ್ ಆಗಿ ಕೆಲಸ ಮಾಡುತ್ತಿರುವ ಸೋಮಶೇಖರ್ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಗೂ ತಮ್ಮ ಕುಟಂಬಕ್ಕೂ ಜೀವ ಬೆದರಿಕೆ ಇದೆ, ಅವರನ್ನು ಕರೆಸಿ ಎಚ್ಚರಿಕೆ ಕೊಡಿ ಎಂದು ಮನವಿ ಮಾಡಿದ್ದಾರೆ.
ಖಾಸಗಿ ಚಾನೆಲ್ ನಲ್ಲಿ ನಡೆದ ಕಾಮಿಡಿ ಗ್ಯಾಂಗ್ ಕಾರ್ಯಕ್ರಮದಿಂದ ಸೋಮಶೇಖರ್ ಅವರಿಗೆ ಒಂದಷ್ಟು ಹಣ ಬಂದಿತ್ತಂತೆ. ಆ ಹಣವನ್ನು ಸೀನಿಯರ್ ಗಳಾದ ಚಿದಾನಂದ್ ಹಾಗೂ ಅನಿ ಎನ್ನುವವರಿಗೂ ನೀಡಿ ಎಂದು ಕೇಳಿದ್ದರೆಂತೆ. ಅದಕ್ಕೆ ಒಪ್ಪದ ಸೋಮಶೇಖರ್ ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಿಸಿರುವ ಸೋಮಶೇಖರ್, ನಯನಾ ಮಾತನಾಡಿರುವ ಆಡಿಯೋ ಕೂಡ ನೀಡಿದ್ದಾರೆ.
ಆಡಿಯೋ : ಹಾಯ್ ಸೋಮ.. ನಾನು ಈ ಆಡಿಯೋವನ್ನು ನಮ್ಮ ಏರಿಯಾದ ಆರ್ ಆರ್ ನಗರ ಪೊಲೀಸ್ ಠಾಣೆಯಿಂದ ಕಳುಹಿಸುತ್ತಿದ್ದೇನೆ. ಚಿದುಗೆ ಮತ್ತು ಅನಿಗೆ ನೀನು ಹಣ ಕೊಟ್ಟಿಲ್ಲವಂತೆ. ಅವರಿಗೆ ಹಣ ನೀಡದೆ ಹೋದರೆ ಪೊಲೀಸರಿಗೆ ದೂರು ನೀಡುತ್ತೇವೆ. ಆಮೇಲೆ ಅವರೇ ನೀನು ಎಲ್ಲಿ ಇದ್ದರು ಎಳೆದು ತರುತ್ತಾರೆ. ಆ ಹಣ ಎಲ್ಲರಿಗೂ ಸೇರಿದ್ದು. ಆದ್ರೆ ನೀನು ನಿನ್ನ ಲುಚ್ಚಾ ಬುದ್ದಿಯನ್ನು ತೋರಿಸಿದ್ದೀಯಾ. ದಯವಿಟ್ಟು ಆದಷ್ಟು ಬೇಗ ದುಡ್ಡು ತಲುಪಿಸು ಇಲ್ಲವಾದರೆ ನಾವೂ ಏನು ಮಾಡುವುದಕ್ಕೂ ಹೇಸುವುದಿಲ್ಲ. ಮಿಸ್ಟರ್ ಸೋಮ ಅವರೇ ಅದೇನೋ ರೂಲ್ಸ್ ಬಗ್ಗೆ ಎಲ್ಲಾ ಮಾತಾಡಿದ್ರಂತೆ. ಹೋಗಿ ಅದ್ಯಾವ ಪೊಲೀಸ್ ಸ್ಟೇಷನ್ ಗೆ ಹೋಗುತ್ತೀರಾ ಹೋಗಿ. ಅದೇನು ದೂರು ಕೊಡ್ತೀರಾ ಕೊಡಿ. ನಿಮಗಿದು ಲಾಸ್ಟ್ ಕಾಲ್, ಇನ್ಮೇಲೆ ಬೆಂಗಳೂರಿನಲ್ಲಿ ಅದೇಗೆ ಓಡಾಡ್ತೀಯಾ ಅನ್ನೋದನ್ನ ನಾನು ನೋಡ್ತೀನಿ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ಕೇಕ್ ಹಚ್ಚಿದ ಗಲಾಟೆ ರಕ್ತಪಾತಕ್ಕೆ: ಹುಟ್ಟುಹಬ್ಬದ ಪಾರ್ಟಿ ಮೂರು ಯುವಕರ ಸಾವಿನಲ್ಲಿ ಅಂತ್ಯ

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…

17 hours ago

ಮಧ್ಯಪ್ರದೇಶದಲ್ಲಿ ಅಧಿಕಾರ ದರ್ಪ: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ – ಸಚಿವನ ಸಹೋದರ ವಿರುದ್ಧ ಗಂಭೀರ ಆರೋಪ

ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…

17 hours ago

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಬೆಚ್ಚಿ ಬೀಳಿಸುವ ಕಥೆ ಹೇಳಿದ ಯುವತಿ..!

ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…

17 hours ago

ಚಲಿಸುತ್ತಿದ್ದ ರೈಲಿನಿಂದ ಮಗು ಬಿದ್ದು ದುರಂತ: ಚೈನ್ ಎಳೆದರೂ ನಿಲ್ಲದ ರೈಲು, ತಾಯಿಯ ಕಣ್ಣೀರಿನ ಅಳಲು

ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…

18 hours ago

SSC 2026 ಭರ್ಜರಿ ನೇಮಕಾತಿ: 3,734 ಹುದ್ದೆಗಳು – ಮೇ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…

23 hours ago

ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…

23 hours ago