Latest

ವೃದ್ಧನ ಹೊಟ್ಟೆಯಲ್ಲಿ ಬರೋಬ್ಬರಿ 187 ನಾಣ್ಯಗಳು!!!

ವೃದ್ಧನೊಬ್ಬ ನುಂಗಿದ 187 ನಾಣ್ಯಗಳನ್ನು ಎಂಡೋಸ್ಕೋಪಿ ಮೂಲಕ ಹೊಟ್ಟೆಯಿಂದ ಯಶಸ್ವಿಯಾಗಿ ಬಾಗಲಕೋಟೆಯ ಶ್ರೀ ಕುಮಾರೇಶ್ವರ ಆಸ್ಪತ್ರೆಯ ವೈದ್ಯರು ಹೊರ ತೆಗೆದಿದ್ದಾರೆ.
ಡಾಕ್ಟರ್ ಈಶ್ವರ ಕಲಬುರ್ಗಿ ಮತ್ತು ಡಾಕ್ಟರ್ ಪ್ರಕಾಶ್ ಕಟ್ಟಿಮನಿ ವೈದ್ಯರೊಂದಿಗೆ ಅರವಳಿಕೆ ತಜ್ಞರಾದ ಡಾಕ್ಟರ್ ಅರ್ಚನಾ ಮತ್ತು ರೂಪ ಕುಲಕುಂದೆ ಚಿಕಿತ್ಸೆ ನೀಡಿರುತ್ತಾರೆ.
ಲಿಂಗಸಗೂರು ತಾಲೂಕಿನ ಡ್ಯಾಮಪ್ಪ ಹರಿಜನ ಎಂಬ 58 ವರ್ಷದ ವಯಸ್ಸಿನ ವೃದ್ಧ ಐದು ರೂಪಾಯಿ 56 ನಾಣ್ಯಗಳು ಎರಡು ರೂಪಾಯಿಯ 51 ನಾಣ್ಯಗಳು ಮತ್ತು ಒಂದು ರೂಪಾಯಿಯ 80 ನಾಣ್ಯಗಳನ್ನು ಹೀಗೆ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು. ನುಂಗಿದ ಒಟ್ಟು ನಾಣ್ಯಗಳ ತೂಕ ಒಂದುವರೆ ಕಿಲೋ ಎಂದು ಹೇಳಲಾಗುತ್ತಿದೆ.
ವಿಷಯ ತಿಳಿದ ಕುಟುಂಬದ ಸದಸ್ಯರು ದಿನಾಂಕ 26 11 2018 ರಂದು ಬಾಗಲಕೋಟೆಯ ಶ್ರೀ ಕುಮಾರಸ್ವಾಮಿ ಆಸ್ಪತ್ರೆಗೆ ಕರೆತಂದು ತುರ್ತು ಚಿಕಿತ್ಸೆಗೆ ಒಳಪಡಿಸಿದಾಗ ವೈದ್ಯರು ಎಕರೆ ಮಾಡಿ ಪರೀಕ್ಷಿಸಿದಾಗ ನುಂಗಿದ ನಾಣ್ಯಗಳು ಕಂಡು ಬಂದಿವೆ.
ರೋಗಿಯ ಜೀವಕ್ಕೆ ಅಪಾಯವಿರುವುದು ತಿಳಿದುಬಂದ ನಂತರ ಎಂಡೊಸ್ಕೋಪಿ ಮಾಡಿ ನಾಣ್ಯಗಳನ್ನು ಹೊರ ತೆಗೆದು ರೋಗಿಯನ್ನು ಪ್ರಾಣಾಪಾಯದಿಂದ ಉಳಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಚಿಕಿತ್ಸೆಯ ನಂತರ ರೋಗಿಯು ಚೇತರಿಸಿಕೊಳ್ಳುತ್ತಿರುವನೆಂದು ವೈದ್ಯರು ಹೇಳಿದ್ದಾರೆ.
ಚಿಕಿತ್ಸೆ ನೀಡಿ ರೋಗಿಯನ್ನು ಗುಣಮುಖಗೊಳಿಸಿದ ವೈದ್ಯರನ್ನು ವೈದ್ಯಕೀಯ ಸಮೂಹ ಹಾಗೂ ಶಾಸಕರು ಅಭಿನಂದಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

3 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

3 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

3 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

3 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

23 hours ago