Latest

ಡಾಕ್ಟರ್ ಮದ್ಯದ ಅಮಲಿನಲ್ಲಿ ಡ್ಯೂಟಿಗೆ ಹಾಜರ್.! : ರೋಗಿಯ ಕುಟುಂಬದವರ ಆಕ್ರೋಶ.

ಸವದತ್ತಿ (ಬೆಳಗಾವಿ ಜಿಲ್ಲೆ): ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ರೋಗಿ ತಪಾಸಣೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಬೆಳಕಿಗೆ ಬಂದಿದೆ. ಡಾ. ಸುರೇಶ್ ಹಿತ್ತಲಮನಿ ಎಂಬ ವೈದ್ಯ ಎಣ್ಣೆ ಕುಡಿದು ಡ್ಯೂಟಿಗೆ ಬಂದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಂದರ ಪರೀಕ್ಷೆ ನಡೆಸಿರುವ ಆರೋಪ ಕೇಳಿ ಬಂದಿದೆ.

ವೈದ್ಯನ ಅಸಭ್ಯ ನಡವಳಿಕೆಯಿಂದ ಅಸಹನೆಯಾದ ರೋಗಿಯ ಕುಟುಂಬದವರು ಈ ತಕ್ಷಣ ವೈದ್ಯನ ತಪಾಸನೆ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೆ ವೈದ್ಯ ಅವರ ಮಾತಿಗೆ ಕಿವಿಯೊಡ್ಡದೇ ತುರಟತನದಿಂದ ರೋಗಿಯನ್ನು ಪರೀಕ್ಷಿಸಲು ಮುಂದಾಗಿದ್ದಾರೆ. ಎದ್ದು ನಿಲ್ಲಲಾಗದಷ್ಟರ ಮಟ್ಟಿಗೆ ಟೈಟಾಗಿ ಇದ್ದ ವೈದ್ಯ, ಕಣ್ಣು ಕಣ್ಣಿಗೆ ಬೀಳದಂತೆ ತೇಲಾಡುತ್ತಲೇ ರೋಗಿಯನ್ನು ನೋಡಿದ್ದಾರೆ.

ಈ ಅಸಾಧಾರಣ ಘಟನೆಯ ವೇಳೆ ರೋಗಿಯ ಸಂಬಂಧಿಕರು ವೈದ್ಯನ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿ, ಮಾತನಾಡಿ ತೀರ್ಥಿಸಿ, ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ, ಆಸ್ಪತ್ರೆಯ ನರ್ಸ್ ಮಧ್ಯಪ್ರವೇಶ ಮಾಡಿ ರೋಗಿಯನ್ನು ತಾನೇ ತಪಾಸಿಸುತ್ತೇನೆ ಎಂದು ಮುಂದಾಗಿದ್ದಾರೆ.

ಸ್ಥಳೀಯರು ಮತ್ತು ರೋಗಿಗಳು ನೀಡಿದ ಮಾಹಿತಿಯ ಪ್ರಕಾರ, ಡಾ. ಸುರೇಶ್ ಹಿತ್ತಲಮನಿ ಈ ಹಿಂದೆಯೂ ಅನೇಕ ಬಾರಿ ಮದ್ಯಪಾನದ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದು ರೋಗಿಗಳನ್ನು ಪರೀಕ್ಷಿಸಿರುವುದು ಗೊತ್ತಾಗಿದೆ. ಈ ಬಗ್ಗೆ ಅನೇಕ ಬಾರಿ ಸಂಬಂಧಿತ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂಬ ದೂರಿವೆ. ಆದರೆ ಈ ತನಕ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಮರ್ಪಕ ತನಿಖೆ ಹಾಗೂ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

5 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

5 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

5 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

5 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

5 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago