ಸವದತ್ತಿ (ಬೆಳಗಾವಿ ಜಿಲ್ಲೆ): ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ರೋಗಿ ತಪಾಸಣೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಬೆಳಕಿಗೆ ಬಂದಿದೆ. ಡಾ. ಸುರೇಶ್ ಹಿತ್ತಲಮನಿ ಎಂಬ ವೈದ್ಯ ಎಣ್ಣೆ ಕುಡಿದು ಡ್ಯೂಟಿಗೆ ಬಂದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಂದರ ಪರೀಕ್ಷೆ ನಡೆಸಿರುವ ಆರೋಪ ಕೇಳಿ ಬಂದಿದೆ.
ವೈದ್ಯನ ಅಸಭ್ಯ ನಡವಳಿಕೆಯಿಂದ ಅಸಹನೆಯಾದ ರೋಗಿಯ ಕುಟುಂಬದವರು ಈ ತಕ್ಷಣ ವೈದ್ಯನ ತಪಾಸನೆ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೆ ವೈದ್ಯ ಅವರ ಮಾತಿಗೆ ಕಿವಿಯೊಡ್ಡದೇ ತುರಟತನದಿಂದ ರೋಗಿಯನ್ನು ಪರೀಕ್ಷಿಸಲು ಮುಂದಾಗಿದ್ದಾರೆ. ಎದ್ದು ನಿಲ್ಲಲಾಗದಷ್ಟರ ಮಟ್ಟಿಗೆ ಟೈಟಾಗಿ ಇದ್ದ ವೈದ್ಯ, ಕಣ್ಣು ಕಣ್ಣಿಗೆ ಬೀಳದಂತೆ ತೇಲಾಡುತ್ತಲೇ ರೋಗಿಯನ್ನು ನೋಡಿದ್ದಾರೆ.
ಈ ಅಸಾಧಾರಣ ಘಟನೆಯ ವೇಳೆ ರೋಗಿಯ ಸಂಬಂಧಿಕರು ವೈದ್ಯನ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿ, ಮಾತನಾಡಿ ತೀರ್ಥಿಸಿ, ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ, ಆಸ್ಪತ್ರೆಯ ನರ್ಸ್ ಮಧ್ಯಪ್ರವೇಶ ಮಾಡಿ ರೋಗಿಯನ್ನು ತಾನೇ ತಪಾಸಿಸುತ್ತೇನೆ ಎಂದು ಮುಂದಾಗಿದ್ದಾರೆ.
ಸ್ಥಳೀಯರು ಮತ್ತು ರೋಗಿಗಳು ನೀಡಿದ ಮಾಹಿತಿಯ ಪ್ರಕಾರ, ಡಾ. ಸುರೇಶ್ ಹಿತ್ತಲಮನಿ ಈ ಹಿಂದೆಯೂ ಅನೇಕ ಬಾರಿ ಮದ್ಯಪಾನದ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದು ರೋಗಿಗಳನ್ನು ಪರೀಕ್ಷಿಸಿರುವುದು ಗೊತ್ತಾಗಿದೆ. ಈ ಬಗ್ಗೆ ಅನೇಕ ಬಾರಿ ಸಂಬಂಧಿತ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂಬ ದೂರಿವೆ. ಆದರೆ ಈ ತನಕ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಮರ್ಪಕ ತನಿಖೆ ಹಾಗೂ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…
ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…
ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…