ನವದೆಹಲಿ: ದೇಶಾದ್ಯಂತ ಔಷಧಿಗಳ ಮಾರಾಟ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ಸಿರಪ್ಗಳನ್ನು ವೈದ್ಯರ ಲಿಖಿತ ಪ್ರಿಸ್ಕ್ರಿಪ್ಷನ್ ಇಲ್ಲದೆ ಖರೀದಿಸಲು ಅವಕಾಶ ಇರುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಘೋಷಿಸಿದೆ.
ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಡ್ರಗ್ಸ್ ನಿಯಮಾವಳಿಗಳು-1945ಕ್ಕೆ ತಿದ್ದುಪಡಿ ತರಲಾಗಿದೆ. ಈ ಹೊಸ ನಿಯಮಗಳನ್ನು ‘ಡ್ರಗ್ಸ್ (ಐದನೇ ತಿದ್ದುಪಡಿ) ನಿಯಮಗಳು, 2026’ ಎಂದು ಹೆಸರಿಸಲಾಗಿದೆ.
ತಿದ್ದುಪಡಿಯ ಪ್ರಕಾರ, ಡ್ರಗ್ಸ್ ನಿಯಮಾವಳಿಗಳ ಷೆಡ್ಯೂಲ್-ಕೆ (Schedule K) ಅಡಿಯಲ್ಲಿ ನೀಡಲಾಗಿದ್ದ ವಿನಾಯಿತಿ ಪಟ್ಟಿಯಿಂದ ‘ಸಿರಪ್ಸ್’ (Syrups) ಎಂಬ ಪದವನ್ನು ಕೈಬಿಡಲಾಗಿದೆ. ಇದರಿಂದ ಸಿರಪ್ಗಳ ಮುಕ್ತ ಮಾರಾಟಕ್ಕೆ ಇದ್ದ ಅವಕಾಶ ಕೊನೆಗೊಂಡಿದೆ.
ಹೊಸ ನಿಯಮದ ಅನ್ವಯ, ಸಾರ್ವಜನಿಕರು ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ಸಿರಪ್ ಖರೀದಿಸಬೇಕಾದರೆ ವೈದ್ಯರು ನೀಡಿದ ಅಧಿಕೃತ ಪ್ರಿಸ್ಕ್ರಿಪ್ಷನ್ ತೋರಿಸುವುದು ಕಡ್ಡಾಯವಾಗುತ್ತದೆ. ಇನ್ನು ಮುಂದೆ ಇಂತಹ ಔಷಧಿಗಳನ್ನು ಮೆಡಿಕಲ್ ಅಂಗಡಿಗಳಲ್ಲಿ ನೇರವಾಗಿ ಅಥವಾ ಓವರ್ ದಿ ಕೌಂಟರ್ (OTC) ಮೂಲಕ ಪಡೆಯಲು ಸಾಧ್ಯವಾಗುವುದಿಲ್ಲ.
ಅಧಿಕೃತ ಗೆಜೆಟ್ನಲ್ಲಿ ಪ್ರಕಟವಾದ ದಿನಾಂಕದಿಂದಲೇ ಈ ನಿಯಮ ಜಾರಿಗೆ ಬರಲಿದ್ದು, ಜಂಟಿ ಕಾರ್ಯದರ್ಶಿ ಹರ್ಷ್ ಮಂಗ್ಲಾ ಸಹಿ ಮಾಡಿರುವ ಅಧಿಸೂಚನೆಯಲ್ಲಿ ಈ ಮಾಹಿತಿ ಉಲ್ಲೇಖಿಸಲಾಗಿದೆ.
ಸಿರಪ್ಗಳ ಅತಿಯಾದ ಬಳಕೆ ಹಾಗೂ ದುರ್ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಹೊಸ ನಿಯಮದಿಂದ ಔಷಧಿಗಳ ಬಳಕೆಯಲ್ಲಿ ಹೆಚ್ಚಿನ ನಿಯಂತ್ರಣ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆ ಸಾಧ್ಯವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಸೇನೆಯ (IAF) ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ…
ಬಾಗಲಕೋಟೆ: ತಾಲ್ಲೂಕಿನ ನಾಯನೇಗಲಿ ಗ್ರಾಮದಲ್ಲಿ ಪಿಕೆಪಿಎಸ್ ಬ್ಯಾಂಕ್ನ ನೂತನ ಕಚೇರಿಯನ್ನು ಇಂದು ಬೆಳಿಗ್ಗೆ 9.30 ಗಂಟೆಗೆ ಬಾಗಲಕೋಟೆ ಗ್ರಾಮೀಣ ಕ್ಷೇತ್ರದ…
ಬೆಂಗಳೂರು: ಪ್ರೇಮ ಸಂಬಂಧ, ಗುಟ್ಟಿನ ಮದುವೆ ಹಾಗೂ ಕುಟುಂಬದ ವಿರೋಧದ ನಡುವೆ ಯುವತಿಯೊಬ್ಬಳು ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್…
ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬೃಹತ್…
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಮದ್ಯದ ಅಮಲಿನಲ್ಲಿದ್ದ ರೌಡಿಶೀಟರ್ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ…
ಗೋಕಾಕ: ಅನೈತಿಕ ಸಂಬಂಧಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆಯನ್ನು ಕೊಲೆ ಮಾಡಿ, ನಂತರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ…