ದೊಡ್ಡಬಳ್ಳಾಪುರ: ಅಧಿಕಾರ ದುರುಪಯೋಗ ಮಾಡಿಕೊಂಡು ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಲೆಕ್ಕಾಚಾರ ತಪ್ಪಿದ ಬಲಿಯಾದರು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ಲಂಚ ಪಡೆಯುವ ಸಂದರ್ಭದಲ್ಲೇ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.
ಮಾಹಿತಿಯಂತೆ, ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ ನಂಬರ್ 1/1A1 ವ್ಯಾಪ್ತಿಯಲ್ಲಿರುವ ಜಮೀನಿನ ಕೋರ್ಟ್ ಸೇಲ್ ಡೀಡ್ ಆಧಾರದ ಮೇಲೆ ಖಾತೆ ಮಾಡಿಕೊಡುವ ಪ್ರಕ್ರಿಯೆ ನಡೆಯುತ್ತಿದ್ದಿತ್ತು. ಈ ಸಂಬಂಧ ಅಪ್ಪಗೊಂಡನಹಳ್ಳಿ ಗ್ರಾಮದ ವಕೀಲ ದೊರೆಸ್ವಾಮಿ.ಎಲ್ ಅವರು ಸಂಬಂಧಿಸಿದ ದಾಖಲಾತಿಗಳನ್ನು ಪ್ರಸ್ತುತಪಡಿಸಿದ್ದರು. ಆದರೆ, ಕೆಲಸ ಮುಗಿಸಲು ದಿವಾಕರ್ ಸುಮಾರು 2 ಲಕ್ಷ ರೂಪಾಯಿ ಲಂಚ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ 1.5 ಲಕ್ಷ ರೂಪಾಯಿ ನೀಡುವಂತೆ ಒಪ್ಪಂದವಾಗಿತ್ತು.
ಇಂದು ದೇವನಹಳ್ಳಿಯೊಂದರಲ್ಲಿ ನಿರ್ಧಿಷ್ಟ ಸ್ಥಳದಲ್ಲಿ ಹಣ ಹಸ್ತಾಂತರ ನಡೆಯುತ್ತಿದ್ದ ವೇಳೆ, ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಿವಾಕರ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದರು. ದಾಳಿಗೆ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ನೇತೃತ್ವ ವಹಿಸಿದ್ದರು.
ಸದ್ಯಕ್ಕೆ ಆರೋಪಿಯನ್ನು ವಶಕ್ಕೆ ಪಡೆದು, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಮತ್ತಷ್ಟು ಮಾಹಿತಿ ತನಿಖೆ ಬಳಿಕ ಲಭ್ಯವಾಗಲಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…