ದೊಡ್ಡಬಳ್ಳಾಪುರ: ಅಧಿಕಾರ ದುರುಪಯೋಗ ಮಾಡಿಕೊಂಡು ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಲೆಕ್ಕಾಚಾರ ತಪ್ಪಿದ ಬಲಿಯಾದರು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ಲಂಚ ಪಡೆಯುವ ಸಂದರ್ಭದಲ್ಲೇ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.
ಮಾಹಿತಿಯಂತೆ, ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ ನಂಬರ್ 1/1A1 ವ್ಯಾಪ್ತಿಯಲ್ಲಿರುವ ಜಮೀನಿನ ಕೋರ್ಟ್ ಸೇಲ್ ಡೀಡ್ ಆಧಾರದ ಮೇಲೆ ಖಾತೆ ಮಾಡಿಕೊಡುವ ಪ್ರಕ್ರಿಯೆ ನಡೆಯುತ್ತಿದ್ದಿತ್ತು. ಈ ಸಂಬಂಧ ಅಪ್ಪಗೊಂಡನಹಳ್ಳಿ ಗ್ರಾಮದ ವಕೀಲ ದೊರೆಸ್ವಾಮಿ.ಎಲ್ ಅವರು ಸಂಬಂಧಿಸಿದ ದಾಖಲಾತಿಗಳನ್ನು ಪ್ರಸ್ತುತಪಡಿಸಿದ್ದರು. ಆದರೆ, ಕೆಲಸ ಮುಗಿಸಲು ದಿವಾಕರ್ ಸುಮಾರು 2 ಲಕ್ಷ ರೂಪಾಯಿ ಲಂಚ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ 1.5 ಲಕ್ಷ ರೂಪಾಯಿ ನೀಡುವಂತೆ ಒಪ್ಪಂದವಾಗಿತ್ತು.
ಇಂದು ದೇವನಹಳ್ಳಿಯೊಂದರಲ್ಲಿ ನಿರ್ಧಿಷ್ಟ ಸ್ಥಳದಲ್ಲಿ ಹಣ ಹಸ್ತಾಂತರ ನಡೆಯುತ್ತಿದ್ದ ವೇಳೆ, ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಿವಾಕರ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದರು. ದಾಳಿಗೆ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ನೇತೃತ್ವ ವಹಿಸಿದ್ದರು.
ಸದ್ಯಕ್ಕೆ ಆರೋಪಿಯನ್ನು ವಶಕ್ಕೆ ಪಡೆದು, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಮತ್ತಷ್ಟು ಮಾಹಿತಿ ತನಿಖೆ ಬಳಿಕ ಲಭ್ಯವಾಗಲಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…