Latest

ಡಾಲಿ ಧನಂಜಯ್- ಡಾ. ಧನ್ಯತಾ ಮದುವೆ ಸಂಭ್ರಮ: ಮೈಸೂರಿನಲ್ಲಿ ವೈಭವದ ಹಬ್ಬ!

ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಬಹುಕಾಲದ ಗೆಳತಿ ಡಾ. ಧನ್ಯತಾ ಅವರ ವಿವಾಹ ಮಹೋತ್ಸವ ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಕುಟುಂಬದ ಹತ್ತಿರದವರು ಹಾಗೂ ಸ್ನೇಹಿತರು ಭಾಗಿಯಾಗಿರುವ ಈ ಅದ್ಧೂರಿ ಮದುವೆ ಸಮಾರಂಭಕ್ಕೆ ಚಿತ್ರರಂಗದ ಅನೇಕ ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ಹಳದಿ ಶಾಸ್ತ್ರದ ಅದ್ಧೂರಿ ಸಂಭ್ರಮ

ನಿನ್ನೆ (ಫೆಬ್ರವರಿ 14) ಭರ್ಜರಿಯಾಗಿ ಹಳದಿ ಕಾರ್ಯಕ್ರಮ ನೆರವೇರಿದ್ದು, ಧನಂಜಯ್ ಮತ್ತು ಧನ್ಯತಾ ಅವರ ಅರಿಶಿಣ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಚಿತ್ರಗಳು ನೋಡಿದರೆ, ಈ ಜೋಡಿಯ ಖುಷಿಯು ಅವರ ಮುಖದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಇಂದು ಆರತಕ್ಷತೆ – ನಾಳೆ ಮದುವೆ ಮಹೋತ್ಸವ

ಇಂದು ಸಂಜೆ (ಫೆಬ್ರವರಿ 15) ಆರತಕ್ಷತೆ ಕಾರ್ಯಕ್ರಮ ಜರುಗಲಿದ್ದು, ಇದಕ್ಕೆ ಸಿನಿಮಾ ಕ್ಷೇತ್ರದ ಅನೇಕ ಗಣ್ಯರು ಆಗಮಿಸಲಿದ್ದಾರೆ. ನಂತರ, ನಾಳೆ (ಫೆಬ್ರವರಿ 16) ಧನಂಜಯ್ ಮತ್ತು ಧನ್ಯತಾ ಪರಸ್ಪರ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪ್ರವೇಶಿಸಲಿದ್ದಾರೆ.

ಸ್ಯಾಂಡಲ್‌ವುಡ್‌ ತಾರೆಯರ ಹಾಜರಾತಿ

ಈ ಅದ್ಧೂರಿ ವಿವಾಹ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಹಲವಾರು ದೊಡ್ಡ ಸ್ಟಾರ್‌ಗಳು ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ರಶ್ಮಿಕಾ ಮಂದಣ್ಣ, ತೆಲುಗು ಸೂಪರ್‌ಸ್ಟಾರ್‌ಗಳಾದ ಚಿರಂಜೀವಿ, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಅವರ ಹಾಜರಾತಿಯಿಂದ ಈ ಮದುವೆ ಸಮಾರಂಭಕ್ಕೆ ಮತ್ತಷ್ಟು ಕಂಗೊಳ ಸೇರುವ ನಿರೀಕ್ಷೆಯಿದೆ.

ಡಾಲಿ ಧನಂಜಯ್‌ ಅವರ ಈ ಹೊಸ ಜೀವನದ ಪ್ರಾರಂಭಕ್ಕೆ ಅಭಿಮಾನಿಗಳು ಹಾಗೂ ಚಿತ್ರರಂಗದ ಮಂದಿ ಶುಭಕೋರುತ್ತಿದ್ದಾರೆ!

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago