ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ ನೇರ ಪರಿಣಾಮ ಭಾರತದಲ್ಲಿಯೂ ಕಾಣಿಸಿಕೊಂಡಿದ್ದು, ವಿಶೇಷವಾಗಿ ಎಲ್ಪಿಜಿ (LPG) ಗ್ಯಾಸ್ ಸರಬರಾಜಿನಲ್ಲಿ ಬಹಳಷ್ಟು ವ್ಯತ್ಯಯ ಕಂಡುಬರುತ್ತಿದೆ ಇದರ ನಡುವೆ ಸ್ಥಳೀಯ ಹೋಟೆಲ್ಗಳಲ್ಲಿ ಹಾಗೂ ಎಗ್ ರೈಸ್ ಸೆಂಟರ್ ಗಳಲ್ಲಿ ಗೃಹಬಳಕೆಯ ಸಿಲಿಂಡರ್ಗಳನ್ನು ಬಳಸುತ್ತಿದ್ದಾರೆ.
ಜನರು ಪ್ರತಿ ದಿನ ಗ್ರಹಬಳಕೆಯ ಸಿಲಿಂಡರ್ ಗಳನ್ನು ಪಡೆಯಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ ಆದರೆ ವಾಣಿಜ್ಯ ಸಿಲಿಂಡರ್ ಗಳನ್ನು ಬಳಸಬೇಕಾದ ಹೋಟೆಲ್ ಗಳು ಮಾತ್ರ ನಿರಂತರವಾಗಿ ಗ್ರಹ ಬಳಕೆಯ ಸಿಲಿಂಡರ್ ಗಳನ್ನು ಬಳಸುತ್ತಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯವೇ?
ಹೌದು,ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸಮಸ್ಯೆಗೆ ಕಾರಣವೆಂದು ಹೇಳಬಹುದು. ನಿಯಮಿತ ಪರಿಶೀಲನೆ ಇಲ್ಲದ ಕಾರಣ ಹೋಟೆಲ್ಗಳು ನಿರ್ಬಂಧವಿಲ್ಲದೆ ಗೃಹ ಬಳಕೆಯ ಸಿಲಿಂಡರ್ ಬಳಕೆ ಮಾಡುತ್ತಿರುವುದು ಮುಂದುವರಿಯುತ್ತಿದೆ.
ಸಾರ್ವಜನಿಕರ ಅಭಿಪ್ರಾಯ:-
ಸ್ಥಳೀಯ ನಿವಾಸಿಗಳು ಈ ಸಮಸ್ಯೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ
“ನಾವು ಮನೆಗೆ ಸಿಲಿಂಡರ್ಗಾಗಿ ಕಾಯಬೇಕಾದ ಪರಿಸ್ಥಿತಿ. ಆದರೆ ಹೋಟೆಲ್ಗಳಲ್ಲಿ ಅದನ್ನು ದುರುಪಯೋಗ ಮಾಡುತ್ತಿದ್ದಾರೆ ಇದು ಕಣ್ಮುಂದೆ ಕಂಡರೂ ಕಾಣದಂತೆ ಇರುವ ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ.
ವರದಿ: ಮಂಜುನಾಥ್ ಎಫ್ ಹೆಚ್
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…