Categories: Latest

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ ನೇರ ಪರಿಣಾಮ ಭಾರತದಲ್ಲಿಯೂ ಕಾಣಿಸಿಕೊಂಡಿದ್ದು, ವಿಶೇಷವಾಗಿ ಎಲ್‌ಪಿಜಿ (LPG) ಗ್ಯಾಸ್ ಸರಬರಾಜಿನಲ್ಲಿ ಬಹಳಷ್ಟು ವ್ಯತ್ಯಯ ಕಂಡುಬರುತ್ತಿದೆ ಇದರ ನಡುವೆ ಸ್ಥಳೀಯ ಹೋಟೆಲ್‌ಗಳಲ್ಲಿ ಹಾಗೂ ಎಗ್ ರೈಸ್ ಸೆಂಟರ್ ಗಳಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿದ್ದಾರೆ.


ಜನರು ಪ್ರತಿ ದಿನ ಗ್ರಹಬಳಕೆಯ ಸಿಲಿಂಡರ್ ಗಳನ್ನು ಪಡೆಯಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ ಆದರೆ ವಾಣಿಜ್ಯ ಸಿಲಿಂಡರ್ ಗಳನ್ನು ಬಳಸಬೇಕಾದ ಹೋಟೆಲ್ ಗಳು ಮಾತ್ರ ನಿರಂತರವಾಗಿ ಗ್ರಹ ಬಳಕೆಯ ಸಿಲಿಂಡರ್ ಗಳನ್ನು ಬಳಸುತ್ತಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯವೇ?
ಹೌದು,ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸಮಸ್ಯೆಗೆ ಕಾರಣವೆಂದು ಹೇಳಬಹುದು. ನಿಯಮಿತ ಪರಿಶೀಲನೆ ಇಲ್ಲದ ಕಾರಣ ಹೋಟೆಲ್‌ಗಳು ನಿರ್ಬಂಧವಿಲ್ಲದೆ ಗೃಹ ಬಳಕೆಯ ಸಿಲಿಂಡರ್ ಬಳಕೆ ಮಾಡುತ್ತಿರುವುದು ಮುಂದುವರಿಯುತ್ತಿದೆ.
ಸಾರ್ವಜನಿಕರ ಅಭಿಪ್ರಾಯ:-
ಸ್ಥಳೀಯ ನಿವಾಸಿಗಳು ಈ ಸಮಸ್ಯೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ
“ನಾವು ಮನೆಗೆ ಸಿಲಿಂಡರ್‌ಗಾಗಿ ಕಾಯಬೇಕಾದ ಪರಿಸ್ಥಿತಿ. ಆದರೆ ಹೋಟೆಲ್‌ಗಳಲ್ಲಿ ಅದನ್ನು ದುರುಪಯೋಗ ಮಾಡುತ್ತಿದ್ದಾರೆ ಇದು ಕಣ್ಮುಂದೆ ಕಂಡರೂ ಕಾಣದಂತೆ ಇರುವ ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ.

ವರದಿ: ಮಂಜುನಾಥ್ ಎಫ್ ಹೆಚ್

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago