ಕಾರವಾರ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ದೇಶದ,ರಾಜ್ಯದ ವಿಡಿಯೋಗಳನ್ನು ಬಿತ್ತರಿಸಲಾಗುತ್ತಿದೆ.ಇದರಿಂದ ಜನರು ಆತಂಕಗೊಂಡು ಭಯಗೊಂಡು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು/ ಹಿಡಿದು ಅವರ ಮೇಲೆ ಹಲ್ಲೆ ಮಾಡುವ ಘಟನೆಗಳು ಜರುಗುತ್ತಿವೆ.
ಹಾಗಾಗಿ ಸಾರ್ವಜನಿಕರು ತಮ್ಮ ತಮ್ಮ ಗ್ರಾಮ ,ಶಹರ,ಪಟ್ಟಣ ,ಹಳ್ಳಿಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತರು ಕಂಡುಬಂದಲ್ಲಿ ತಕ್ಷಣ ಉಚಿತ 112 ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು ತಕ್ಷಣವೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಕೂಲಂಕುಶವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವರು .
ಸಾರ್ವಜನಿಕರು ಆತಂಕಗೊಂಡು ಯಾವುದೇ ಕಾರಣಕ್ಕೂ ಅಮಾಯಕ ವ್ಯಕ್ತಿಗಳಿಗೆ ತಡೆಯೊಡ್ಡುವುದಾಗಲಿ, ಹಲ್ಲೆ ಮಾಡುವುದಾಗಲಿ, ಅವರಿಗೆ ತೊಂದರೆ ಕೊಡುವುದಾಗಲಿ ಮಾಡಿದ್ದಲ್ಲಿ ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು.
ಸಣ್ಣ ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹರಡುವವರ ವಿರುದ್ಧ ಕಾನೂನು ಅಡಿಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್ ತಿಳಿಸಿದ್ದಾರೆ.
ವರದಿ :ಮಂಜುನಾಥ ಹರಿಜನ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…