ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್ಓಸಿ ನೀಡಿ ದೊಡ್ಡ ಮಟ್ಟದಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಮುಂದಾಗಿದ್ದು, ನಂಜನಗೂಡು ತಾಲೂಕಿನಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಅವ್ಯವಹಾರ ನಡೆಯುವ ಕೇಂದ್ರ ಸ್ಥಾನವಾಗಿದೆ ನಂಜನಗೂಡು ನಗರಸಭೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ರವರು ಭಾಗವಹಿಸಿದ್ದ ನಗರಸಭೆಯ ಬಿಜೆಪಿ ಸದಸ್ಯರು ಹಾಗೂ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ಖಾಲಿ ಬಿಂದಿಗೆಗಳನ್ನು ಪ್ರದರ್ಶನ ಮಾಡುವ ಮೂಲಕ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಬಿಲ್ ದುಬಾರಿಯಾಗಿದ್ದು ೬೦ ರಿಂದ ೮೦ ಸಾವಿರದಷ್ಟು ಕುಡಿಯುವ ನೀರಿನ ಬಿಲ್ ಬರುತ್ತಿದೆ. ಹಾಗಾಗಿ ಇದೆಲ್ಲ ಸರಿಪಡಿಸುವ ತನಕ ಯಾರು ಕೂಡ ಕುಡಿಯುವ ನೀರಿನ ಬಿಲ್ ಕಟ್ಟಬಾರದು ಎಂದು ಕರೆ ನೀಡಿದರು.
ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದಿದೆ ಆಯ್ಕೆಯಾದ ಸಂದರ್ಭ ನಗರಸಭೆಯ ಮೊದಲ ಸಭೆಯಲ್ಲಿಯೇ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕೇವಲ ಮಾತಿನಲ್ಲಿ ಚಾಟಿ ಬೀಸಿದ್ದರು ಆದರೆ ಈಗ ಅದು ಮರೆಯಾಗಿದೆ ನಂಜನಗೂಡು ಕ್ಷೇತ್ರದಲ್ಲಿ ನಿರಂತರವಾಗಿ ಕಳೆದ ಒಂದುವರೆ ವರ್ಷಗಳಿಂದ ಸರ್ಕಾರಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಎದುರಾಗಿದೆ, ನನ್ನ ಅಧಿಕಾರ ಅವಧಿಯಲ್ಲಿ ಕೆಲವು ಅನಧಿಕೃತ ಬಡಾವಣೆಗಳಿಗೆ ಮುಂದಾಗಿದ್ದAತಹ ಸಂದರ್ಭದಲ್ಲಿ ಲೋಪ ದೋಷ ಕಂಡು ಬಂದ ಕೂಡಲೇ ಅವುಗಳಿಗೆ ಕಡಿವಾಣ ಹಾಕಲಾಗುತ್ತಿತ್ತು. ಆದರೆ ಇಂದಿನ ಶಾಸಕರ ಅವಧಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಎನ್ಓಸಿ ನೀಡಿ ಉತ್ತೇಜಿಸಲಾಗುತ್ತಿದೆ. ಎಂದು ಆರೋಪಿಸಿ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಗರಸಭೆ ಸದಸ್ಯ ಕಪಿಲೇಶ್ ಮಾತನಾಡಿ, ಅಧಿಕಾರಿಗಳ ದುರಾಡಳಿತದ ಬಗ್ಗೆ ನಂಜನಗೂಡು ನಾಗರೀಕರು ಈಗಾಗಲೇ ರೊಚ್ಚಿಗೆದ್ದಿದ್ದಾರೆ, ಕೂಡಲೆ ಎಚ್ಚೆತ್ತು ಯದ್ವಾ-ತದ್ವಾ ಕುಡಿಯುವ ನೀರಿಗೆ ನೀಡುತ್ತಿರುವ ಬಿಲ್ಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು, ತುರ್ತಾಗಿ ನಾವು ನೀಡಿರುವ ಹಲವು ಬೇಡಿಕೆಗಳನ್ನು ಈಡೇರಿಸಿದಿದ್ದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆಯ ಗೇಟ್ಗೆ ಬೀಗ ಜಡಿದು ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಲು ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು . ಬಳಿಕ ನಗರಸಭೆ ಆಯುಕ್ತರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರಂಗನಾಯ್ಕ, ನಗರಸಭೆಯ ಸದಸ್ಯರುಗಳಾದ ಕಪಿಲೇಶ್, ಮಹೇಶ್ ಅತ್ತಿಖಾನೆ, ಎಸ್.ಸಿದ್ದರಾಜು, ಮಹದೇವಮ್ಮ ಮಹದೇವಪ್ರಸಾದ್, ಮುಖಂಡರುಗಳಾದ ಬಾಲಚಂದ್ರು, ಚಂದ್ರಶೇಖರ್, ನಾಗರಾಜು ಶಶಿಕಲಾ, ಗಾಯತ್ರಿ, ಸಂಜಯ್, ಉಮೇಶ್(ಮೋದಿ), ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ರೈತ ಮುಖಂಡರು ಭಾಗವಹಿಸಿದ್ದರು.
ವರದಿ: ಮೋಹನ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…