Latest

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ದೊಡ್ಡ ಮಟ್ಟದಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಮುಂದಾಗಿದ್ದು, ನಂಜನಗೂಡು ತಾಲೂಕಿನಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಅವ್ಯವಹಾರ ನಡೆಯುವ ಕೇಂದ್ರ ಸ್ಥಾನವಾಗಿದೆ ನಂಜನಗೂಡು ನಗರಸಭೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ರವರು ಭಾಗವಹಿಸಿದ್ದ ನಗರಸಭೆಯ ಬಿಜೆಪಿ ಸದಸ್ಯರು ಹಾಗೂ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ಖಾಲಿ ಬಿಂದಿಗೆಗಳನ್ನು ಪ್ರದರ್ಶನ ಮಾಡುವ ಮೂಲಕ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಬಿಲ್ ದುಬಾರಿಯಾಗಿದ್ದು ೬೦ ರಿಂದ ೮೦ ಸಾವಿರದಷ್ಟು ಕುಡಿಯುವ ನೀರಿನ ಬಿಲ್ ಬರುತ್ತಿದೆ. ಹಾಗಾಗಿ ಇದೆಲ್ಲ ಸರಿಪಡಿಸುವ ತನಕ ಯಾರು ಕೂಡ ಕುಡಿಯುವ ನೀರಿನ ಬಿಲ್ ಕಟ್ಟಬಾರದು ಎಂದು ಕರೆ ನೀಡಿದರು.
ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದಿದೆ ಆಯ್ಕೆಯಾದ ಸಂದರ್ಭ ನಗರಸಭೆಯ ಮೊದಲ ಸಭೆಯಲ್ಲಿಯೇ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕೇವಲ ಮಾತಿನಲ್ಲಿ ಚಾಟಿ ಬೀಸಿದ್ದರು ಆದರೆ ಈಗ ಅದು ಮರೆಯಾಗಿದೆ ನಂಜನಗೂಡು ಕ್ಷೇತ್ರದಲ್ಲಿ ನಿರಂತರವಾಗಿ ಕಳೆದ ಒಂದುವರೆ ವರ್ಷಗಳಿಂದ ಸರ್ಕಾರಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಎದುರಾಗಿದೆ, ನನ್ನ ಅಧಿಕಾರ ಅವಧಿಯಲ್ಲಿ ಕೆಲವು ಅನಧಿಕೃತ ಬಡಾವಣೆಗಳಿಗೆ ಮುಂದಾಗಿದ್ದAತಹ ಸಂದರ್ಭದಲ್ಲಿ ಲೋಪ ದೋಷ ಕಂಡು ಬಂದ ಕೂಡಲೇ ಅವುಗಳಿಗೆ ಕಡಿವಾಣ ಹಾಕಲಾಗುತ್ತಿತ್ತು. ಆದರೆ ಇಂದಿನ ಶಾಸಕರ ಅವಧಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ಉತ್ತೇಜಿಸಲಾಗುತ್ತಿದೆ. ಎಂದು ಆರೋಪಿಸಿ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಗರಸಭೆ ಸದಸ್ಯ ಕಪಿಲೇಶ್ ಮಾತನಾಡಿ, ಅಧಿಕಾರಿಗಳ ದುರಾಡಳಿತದ ಬಗ್ಗೆ ನಂಜನಗೂಡು ನಾಗರೀಕರು ಈಗಾಗಲೇ ರೊಚ್ಚಿಗೆದ್ದಿದ್ದಾರೆ, ಕೂಡಲೆ ಎಚ್ಚೆತ್ತು ಯದ್ವಾ-ತದ್ವಾ ಕುಡಿಯುವ ನೀರಿಗೆ ನೀಡುತ್ತಿರುವ ಬಿಲ್ಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು, ತುರ್ತಾಗಿ ನಾವು ನೀಡಿರುವ ಹಲವು ಬೇಡಿಕೆಗಳನ್ನು ಈಡೇರಿಸಿದಿದ್ದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆಯ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಲು ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು . ಬಳಿಕ ನಗರಸಭೆ ಆಯುಕ್ತರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರಂಗನಾಯ್ಕ, ನಗರಸಭೆಯ ಸದಸ್ಯರುಗಳಾದ ಕಪಿಲೇಶ್, ಮಹೇಶ್ ಅತ್ತಿಖಾನೆ, ಎಸ್.ಸಿದ್ದರಾಜು, ಮಹದೇವಮ್ಮ ಮಹದೇವಪ್ರಸಾದ್, ಮುಖಂಡರುಗಳಾದ ಬಾಲಚಂದ್ರು, ಚಂದ್ರಶೇಖರ್, ನಾಗರಾಜು ಶಶಿಕಲಾ, ಗಾಯತ್ರಿ, ಸಂಜಯ್, ಉಮೇಶ್(ಮೋದಿ), ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ರೈತ ಮುಖಂಡರು ಭಾಗವಹಿಸಿದ್ದರು.

ವರದಿ: ಮೋಹನ್

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

10 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

12 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

23 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

23 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

24 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago