Latest

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ದೊಡ್ಡ ಮಟ್ಟದಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಮುಂದಾಗಿದ್ದು, ನಂಜನಗೂಡು ತಾಲೂಕಿನಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಅವ್ಯವಹಾರ ನಡೆಯುವ ಕೇಂದ್ರ ಸ್ಥಾನವಾಗಿದೆ ನಂಜನಗೂಡು ನಗರಸಭೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ರವರು ಭಾಗವಹಿಸಿದ್ದ ನಗರಸಭೆಯ ಬಿಜೆಪಿ ಸದಸ್ಯರು ಹಾಗೂ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ಖಾಲಿ ಬಿಂದಿಗೆಗಳನ್ನು ಪ್ರದರ್ಶನ ಮಾಡುವ ಮೂಲಕ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಬಿಲ್ ದುಬಾರಿಯಾಗಿದ್ದು ೬೦ ರಿಂದ ೮೦ ಸಾವಿರದಷ್ಟು ಕುಡಿಯುವ ನೀರಿನ ಬಿಲ್ ಬರುತ್ತಿದೆ. ಹಾಗಾಗಿ ಇದೆಲ್ಲ ಸರಿಪಡಿಸುವ ತನಕ ಯಾರು ಕೂಡ ಕುಡಿಯುವ ನೀರಿನ ಬಿಲ್ ಕಟ್ಟಬಾರದು ಎಂದು ಕರೆ ನೀಡಿದರು.
ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದಿದೆ ಆಯ್ಕೆಯಾದ ಸಂದರ್ಭ ನಗರಸಭೆಯ ಮೊದಲ ಸಭೆಯಲ್ಲಿಯೇ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕೇವಲ ಮಾತಿನಲ್ಲಿ ಚಾಟಿ ಬೀಸಿದ್ದರು ಆದರೆ ಈಗ ಅದು ಮರೆಯಾಗಿದೆ ನಂಜನಗೂಡು ಕ್ಷೇತ್ರದಲ್ಲಿ ನಿರಂತರವಾಗಿ ಕಳೆದ ಒಂದುವರೆ ವರ್ಷಗಳಿಂದ ಸರ್ಕಾರಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಎದುರಾಗಿದೆ, ನನ್ನ ಅಧಿಕಾರ ಅವಧಿಯಲ್ಲಿ ಕೆಲವು ಅನಧಿಕೃತ ಬಡಾವಣೆಗಳಿಗೆ ಮುಂದಾಗಿದ್ದAತಹ ಸಂದರ್ಭದಲ್ಲಿ ಲೋಪ ದೋಷ ಕಂಡು ಬಂದ ಕೂಡಲೇ ಅವುಗಳಿಗೆ ಕಡಿವಾಣ ಹಾಕಲಾಗುತ್ತಿತ್ತು. ಆದರೆ ಇಂದಿನ ಶಾಸಕರ ಅವಧಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ಉತ್ತೇಜಿಸಲಾಗುತ್ತಿದೆ. ಎಂದು ಆರೋಪಿಸಿ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಗರಸಭೆ ಸದಸ್ಯ ಕಪಿಲೇಶ್ ಮಾತನಾಡಿ, ಅಧಿಕಾರಿಗಳ ದುರಾಡಳಿತದ ಬಗ್ಗೆ ನಂಜನಗೂಡು ನಾಗರೀಕರು ಈಗಾಗಲೇ ರೊಚ್ಚಿಗೆದ್ದಿದ್ದಾರೆ, ಕೂಡಲೆ ಎಚ್ಚೆತ್ತು ಯದ್ವಾ-ತದ್ವಾ ಕುಡಿಯುವ ನೀರಿಗೆ ನೀಡುತ್ತಿರುವ ಬಿಲ್ಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು, ತುರ್ತಾಗಿ ನಾವು ನೀಡಿರುವ ಹಲವು ಬೇಡಿಕೆಗಳನ್ನು ಈಡೇರಿಸಿದಿದ್ದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆಯ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಲು ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು . ಬಳಿಕ ನಗರಸಭೆ ಆಯುಕ್ತರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರಂಗನಾಯ್ಕ, ನಗರಸಭೆಯ ಸದಸ್ಯರುಗಳಾದ ಕಪಿಲೇಶ್, ಮಹೇಶ್ ಅತ್ತಿಖಾನೆ, ಎಸ್.ಸಿದ್ದರಾಜು, ಮಹದೇವಮ್ಮ ಮಹದೇವಪ್ರಸಾದ್, ಮುಖಂಡರುಗಳಾದ ಬಾಲಚಂದ್ರು, ಚಂದ್ರಶೇಖರ್, ನಾಗರಾಜು ಶಶಿಕಲಾ, ಗಾಯತ್ರಿ, ಸಂಜಯ್, ಉಮೇಶ್(ಮೋದಿ), ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ರೈತ ಮುಖಂಡರು ಭಾಗವಹಿಸಿದ್ದರು.

ವರದಿ: ಮೋಹನ್

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago