Latest

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ದೊಡ್ಡ ಮಟ್ಟದಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಮುಂದಾಗಿದ್ದು, ನಂಜನಗೂಡು ತಾಲೂಕಿನಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಅವ್ಯವಹಾರ ನಡೆಯುವ ಕೇಂದ್ರ ಸ್ಥಾನವಾಗಿದೆ ನಂಜನಗೂಡು ನಗರಸಭೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ರವರು ಭಾಗವಹಿಸಿದ್ದ ನಗರಸಭೆಯ ಬಿಜೆಪಿ ಸದಸ್ಯರು ಹಾಗೂ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ಖಾಲಿ ಬಿಂದಿಗೆಗಳನ್ನು ಪ್ರದರ್ಶನ ಮಾಡುವ ಮೂಲಕ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಬಿಲ್ ದುಬಾರಿಯಾಗಿದ್ದು ೬೦ ರಿಂದ ೮೦ ಸಾವಿರದಷ್ಟು ಕುಡಿಯುವ ನೀರಿನ ಬಿಲ್ ಬರುತ್ತಿದೆ. ಹಾಗಾಗಿ ಇದೆಲ್ಲ ಸರಿಪಡಿಸುವ ತನಕ ಯಾರು ಕೂಡ ಕುಡಿಯುವ ನೀರಿನ ಬಿಲ್ ಕಟ್ಟಬಾರದು ಎಂದು ಕರೆ ನೀಡಿದರು.
ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದಿದೆ ಆಯ್ಕೆಯಾದ ಸಂದರ್ಭ ನಗರಸಭೆಯ ಮೊದಲ ಸಭೆಯಲ್ಲಿಯೇ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕೇವಲ ಮಾತಿನಲ್ಲಿ ಚಾಟಿ ಬೀಸಿದ್ದರು ಆದರೆ ಈಗ ಅದು ಮರೆಯಾಗಿದೆ ನಂಜನಗೂಡು ಕ್ಷೇತ್ರದಲ್ಲಿ ನಿರಂತರವಾಗಿ ಕಳೆದ ಒಂದುವರೆ ವರ್ಷಗಳಿಂದ ಸರ್ಕಾರಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಎದುರಾಗಿದೆ, ನನ್ನ ಅಧಿಕಾರ ಅವಧಿಯಲ್ಲಿ ಕೆಲವು ಅನಧಿಕೃತ ಬಡಾವಣೆಗಳಿಗೆ ಮುಂದಾಗಿದ್ದAತಹ ಸಂದರ್ಭದಲ್ಲಿ ಲೋಪ ದೋಷ ಕಂಡು ಬಂದ ಕೂಡಲೇ ಅವುಗಳಿಗೆ ಕಡಿವಾಣ ಹಾಕಲಾಗುತ್ತಿತ್ತು. ಆದರೆ ಇಂದಿನ ಶಾಸಕರ ಅವಧಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ಉತ್ತೇಜಿಸಲಾಗುತ್ತಿದೆ. ಎಂದು ಆರೋಪಿಸಿ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಗರಸಭೆ ಸದಸ್ಯ ಕಪಿಲೇಶ್ ಮಾತನಾಡಿ, ಅಧಿಕಾರಿಗಳ ದುರಾಡಳಿತದ ಬಗ್ಗೆ ನಂಜನಗೂಡು ನಾಗರೀಕರು ಈಗಾಗಲೇ ರೊಚ್ಚಿಗೆದ್ದಿದ್ದಾರೆ, ಕೂಡಲೆ ಎಚ್ಚೆತ್ತು ಯದ್ವಾ-ತದ್ವಾ ಕುಡಿಯುವ ನೀರಿಗೆ ನೀಡುತ್ತಿರುವ ಬಿಲ್ಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು, ತುರ್ತಾಗಿ ನಾವು ನೀಡಿರುವ ಹಲವು ಬೇಡಿಕೆಗಳನ್ನು ಈಡೇರಿಸಿದಿದ್ದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆಯ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಲು ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು . ಬಳಿಕ ನಗರಸಭೆ ಆಯುಕ್ತರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರಂಗನಾಯ್ಕ, ನಗರಸಭೆಯ ಸದಸ್ಯರುಗಳಾದ ಕಪಿಲೇಶ್, ಮಹೇಶ್ ಅತ್ತಿಖಾನೆ, ಎಸ್.ಸಿದ್ದರಾಜು, ಮಹದೇವಮ್ಮ ಮಹದೇವಪ್ರಸಾದ್, ಮುಖಂಡರುಗಳಾದ ಬಾಲಚಂದ್ರು, ಚಂದ್ರಶೇಖರ್, ನಾಗರಾಜು ಶಶಿಕಲಾ, ಗಾಯತ್ರಿ, ಸಂಜಯ್, ಉಮೇಶ್(ಮೋದಿ), ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ರೈತ ಮುಖಂಡರು ಭಾಗವಹಿಸಿದ್ದರು.

ವರದಿ: ಮೋಹನ್

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago