Latest

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ದೊಡ್ಡ ಮಟ್ಟದಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಮುಂದಾಗಿದ್ದು, ನಂಜನಗೂಡು ತಾಲೂಕಿನಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಅವ್ಯವಹಾರ ನಡೆಯುವ ಕೇಂದ್ರ ಸ್ಥಾನವಾಗಿದೆ ನಂಜನಗೂಡು ನಗರಸಭೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಮಾಜಿ ಶಾಸಕ ಹರ್ಷವರ್ಧನ್ ರವರು ಭಾಗವಹಿಸಿದ್ದ ನಗರಸಭೆಯ ಬಿಜೆಪಿ ಸದಸ್ಯರು ಹಾಗೂ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ಖಾಲಿ ಬಿಂದಿಗೆಗಳನ್ನು ಪ್ರದರ್ಶನ ಮಾಡುವ ಮೂಲಕ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಬಿಲ್ ದುಬಾರಿಯಾಗಿದ್ದು ೬೦ ರಿಂದ ೮೦ ಸಾವಿರದಷ್ಟು ಕುಡಿಯುವ ನೀರಿನ ಬಿಲ್ ಬರುತ್ತಿದೆ. ಹಾಗಾಗಿ ಇದೆಲ್ಲ ಸರಿಪಡಿಸುವ ತನಕ ಯಾರು ಕೂಡ ಕುಡಿಯುವ ನೀರಿನ ಬಿಲ್ ಕಟ್ಟಬಾರದು ಎಂದು ಕರೆ ನೀಡಿದರು.
ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದಿದೆ ಆಯ್ಕೆಯಾದ ಸಂದರ್ಭ ನಗರಸಭೆಯ ಮೊದಲ ಸಭೆಯಲ್ಲಿಯೇ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕೇವಲ ಮಾತಿನಲ್ಲಿ ಚಾಟಿ ಬೀಸಿದ್ದರು ಆದರೆ ಈಗ ಅದು ಮರೆಯಾಗಿದೆ ನಂಜನಗೂಡು ಕ್ಷೇತ್ರದಲ್ಲಿ ನಿರಂತರವಾಗಿ ಕಳೆದ ಒಂದುವರೆ ವರ್ಷಗಳಿಂದ ಸರ್ಕಾರಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಎದುರಾಗಿದೆ, ನನ್ನ ಅಧಿಕಾರ ಅವಧಿಯಲ್ಲಿ ಕೆಲವು ಅನಧಿಕೃತ ಬಡಾವಣೆಗಳಿಗೆ ಮುಂದಾಗಿದ್ದAತಹ ಸಂದರ್ಭದಲ್ಲಿ ಲೋಪ ದೋಷ ಕಂಡು ಬಂದ ಕೂಡಲೇ ಅವುಗಳಿಗೆ ಕಡಿವಾಣ ಹಾಕಲಾಗುತ್ತಿತ್ತು. ಆದರೆ ಇಂದಿನ ಶಾಸಕರ ಅವಧಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ ಉತ್ತೇಜಿಸಲಾಗುತ್ತಿದೆ. ಎಂದು ಆರೋಪಿಸಿ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಗರಸಭೆ ಸದಸ್ಯ ಕಪಿಲೇಶ್ ಮಾತನಾಡಿ, ಅಧಿಕಾರಿಗಳ ದುರಾಡಳಿತದ ಬಗ್ಗೆ ನಂಜನಗೂಡು ನಾಗರೀಕರು ಈಗಾಗಲೇ ರೊಚ್ಚಿಗೆದ್ದಿದ್ದಾರೆ, ಕೂಡಲೆ ಎಚ್ಚೆತ್ತು ಯದ್ವಾ-ತದ್ವಾ ಕುಡಿಯುವ ನೀರಿಗೆ ನೀಡುತ್ತಿರುವ ಬಿಲ್ಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು, ತುರ್ತಾಗಿ ನಾವು ನೀಡಿರುವ ಹಲವು ಬೇಡಿಕೆಗಳನ್ನು ಈಡೇರಿಸಿದಿದ್ದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆಯ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಲು ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು . ಬಳಿಕ ನಗರಸಭೆ ಆಯುಕ್ತರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರಂಗನಾಯ್ಕ, ನಗರಸಭೆಯ ಸದಸ್ಯರುಗಳಾದ ಕಪಿಲೇಶ್, ಮಹೇಶ್ ಅತ್ತಿಖಾನೆ, ಎಸ್.ಸಿದ್ದರಾಜು, ಮಹದೇವಮ್ಮ ಮಹದೇವಪ್ರಸಾದ್, ಮುಖಂಡರುಗಳಾದ ಬಾಲಚಂದ್ರು, ಚಂದ್ರಶೇಖರ್, ನಾಗರಾಜು ಶಶಿಕಲಾ, ಗಾಯತ್ರಿ, ಸಂಜಯ್, ಉಮೇಶ್(ಮೋದಿ), ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ರೈತ ಮುಖಂಡರು ಭಾಗವಹಿಸಿದ್ದರು.

ವರದಿ: ಮೋಹನ್

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago