ನಟಿ ಮುಮ್ತಾಜ್ ತಮಿಳು ಚಿತ್ರರಂಗದಲ್ಲಿ ಪ್ರಮುಖ ಸ್ಥಾನ ಪಡೆದ ನಟಿಯರಲ್ಲಿ ಒಬ್ಬರು. ಅವರು ಅನೇಕ ಚಿತ್ರಗಳಲ್ಲಿ ವಿಶೇಷ ಹಾಡುಗಳಲ್ಲಿ ಕಾಣಿಸಿಕೊಂಡಿದ್ದು, ಹೆಚ್ಚಾಗಿ ಗ್ಲಾಮರ್ ಪಾತ್ರಗಳಲ್ಲಿ ಪ್ರಭಾವ ಬೀರಿದ್ದಾರೆ. ಇದೀಗ ಅವರ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ.
ಕನ್ನಡದ ಕಂಠಿ ಸಿನಿಮಾದ ಐಟಂ ಸಾಂಗ್ನಲ್ಲಿ ಮಿಂಚಿದ್ದ ಮುಮ್ತಾಜ್ ಮುಖ್ಯವಾಗಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಹಳೆಯ ಸಂದರ್ಶನವೊಂದರಲ್ಲಿ, ಅವರು ತಮ್ಮ ಮರಣದ ನಂತರ ತಮ್ಮ ಮಾದಕ ಫೋಟೋಗಳನ್ನು ಹಂಚದಿರಲು ವಿನಂತಿಸಿಕೊಂಡಿದ್ದರು. ಈ ಮಾತುಗಳು ಈಗ ಮತ್ತೆ ಚರ್ಚೆಗೆ ಗ್ರಾಸವಾಗಿವೆ.
ಮುಂಬೈ ಮೂಲದ ಮುಮ್ತಾಜ್ ತಮಿಳು ಚಿತ್ರರಂಗಕ್ಕೆ ರಾಜೇಂದ್ರನ್ ನಿರ್ದೇಶಿಸಿದ ಮೋನಿಶಾ ಎನ್ ಮೊನಾಲಿಸಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. “ಮುಮ್ತಾಜ್ ಅಂದರೆ ಗ್ಲಾಮರ್, ಗ್ಲಾಮರ್ ಅಂದರೆ ಮುಮ್ತಾಜ್” ಎನ್ನುವ ಮಾತು ಪ್ರಚಲಿತವಾಗಿತ್ತು. ಆದರೆ 2013ರಲ್ಲಿ ತೆರೆಕಂಡ ಅತ್ತಾರಿಂಟಿಕಿ ದಾರೇದಿ ಸಿನಿಮಾದ ನಂತರ ಅವರು ಚಿತ್ರರಂಗವನ್ನು ಸಂಪೂರ್ಣವಾಗಿ ಬಿಟ್ಟರು.
ನಂತರದ ಬದುಕಿನಲ್ಲಿ ಮುಮ್ತಾಜ್ ಪೂಜೆ ಮತ್ತು ಆಧ್ಯಾತ್ಮದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಈಗಾಗಲೇ ಮೂರು ಬಾರಿ ಮೆಕ್ಕಾಗೆ ಭೇಟಿ ನೀಡಿದ್ದು, ಈ ಪವಿತ್ರ ಸ್ಥಳಕ್ಕೆ ಭೇಟಿ ನೀಡಿದ ಮುಸ್ಲಿಮರು ಧನ್ಯರು ಎಂಬ ನಂಬಿಕೆಯನ್ನು ಒಪ್ಪಿಕೊಂಡಿದ್ದಾರೆ.
ಆಧ್ಯಾತ್ಮದ ಬಗ್ಗೆ ಮಾತನಾಡಿದ ಅವರು, “ನಾನು ಬಾಲ್ಯದಲ್ಲಿ ಧಾರ್ಮಿಕ ಪುಸ್ತಕ ಕುರಾನ್ ಓದಿದರೂ, ಅದರ ಅರ್ಥ ತಿಳಿದಿರಲಿಲ್ಲ. ಈಗ ನಾನು ಬದಲಾಗಿದ್ದೇನೆ. ಕುರಾನ್ನ ಅರ್ಥವನ್ನು ಅರ್ಥಮಾಡಿಕೊಂಡು, ಅಲ್ಲಾಹನಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದೇನೆ. ನನ್ನ ಹಳೆಯ ಜೀವನವನ್ನು ಬದಲಾಯಿಸಲು ಸಾಧ್ಯವಿಲ್ಲ, ಆದರೆ ನನ್ನ ಹೊಸ ಜೀವನವನ್ನು ಶ್ರದ್ಧೆಯಿಂದ ನಡೆಸಲು ಪ್ರಯತ್ನಿಸುತ್ತಿದ್ದೇನೆ,” ಎಂದು ತಿಳಿಸಿದ್ದಾರೆ.
ಅವರು ತಮ್ಮ ಅಂತಿಮ ವಿನಂತಿಯನ್ನು ಹಂಚಿಕೊಳ್ಳುತ್ತಾ, “ನಾನು ಸತ್ತ ನಂತರ ನನ್ನ ಮಾದಕ ಫೋಟೋಗಳನ್ನು ಹಂಚದಿರಲು ನಿಮ್ಮೆಲ್ಲರ ಬಳಿ ಕೋರಿದ್ದೇನೆ. ದಯವಿಟ್ಟು ಇದನ್ನು ನನ್ನ ಕೊನೆಯ ಆಸೆಯಾಗಿ ಗಮನಿಸಿ. ಅವುಗಳನ್ನು ಹಂಚುವುದರಿಂದ ನನ್ನ ಆತ್ಮಕ್ಕೆ ನೋವು ಉಂಟಾಗುತ್ತದೆ,” ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…