ನಟಿ ಮುಮ್ತಾಜ್ ತಮಿಳು ಚಿತ್ರರಂಗದಲ್ಲಿ ಪ್ರಮುಖ ಸ್ಥಾನ ಪಡೆದ ನಟಿಯರಲ್ಲಿ ಒಬ್ಬರು. ಅವರು ಅನೇಕ ಚಿತ್ರಗಳಲ್ಲಿ ವಿಶೇಷ ಹಾಡುಗಳಲ್ಲಿ ಕಾಣಿಸಿಕೊಂಡಿದ್ದು, ಹೆಚ್ಚಾಗಿ ಗ್ಲಾಮರ್ ಪಾತ್ರಗಳಲ್ಲಿ ಪ್ರಭಾವ ಬೀರಿದ್ದಾರೆ. ಇದೀಗ ಅವರ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ.
ಕನ್ನಡದ ಕಂಠಿ ಸಿನಿಮಾದ ಐಟಂ ಸಾಂಗ್ನಲ್ಲಿ ಮಿಂಚಿದ್ದ ಮುಮ್ತಾಜ್ ಮುಖ್ಯವಾಗಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಹಳೆಯ ಸಂದರ್ಶನವೊಂದರಲ್ಲಿ, ಅವರು ತಮ್ಮ ಮರಣದ ನಂತರ ತಮ್ಮ ಮಾದಕ ಫೋಟೋಗಳನ್ನು ಹಂಚದಿರಲು ವಿನಂತಿಸಿಕೊಂಡಿದ್ದರು. ಈ ಮಾತುಗಳು ಈಗ ಮತ್ತೆ ಚರ್ಚೆಗೆ ಗ್ರಾಸವಾಗಿವೆ.
ಮುಂಬೈ ಮೂಲದ ಮುಮ್ತಾಜ್ ತಮಿಳು ಚಿತ್ರರಂಗಕ್ಕೆ ರಾಜೇಂದ್ರನ್ ನಿರ್ದೇಶಿಸಿದ ಮೋನಿಶಾ ಎನ್ ಮೊನಾಲಿಸಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. “ಮುಮ್ತಾಜ್ ಅಂದರೆ ಗ್ಲಾಮರ್, ಗ್ಲಾಮರ್ ಅಂದರೆ ಮುಮ್ತಾಜ್” ಎನ್ನುವ ಮಾತು ಪ್ರಚಲಿತವಾಗಿತ್ತು. ಆದರೆ 2013ರಲ್ಲಿ ತೆರೆಕಂಡ ಅತ್ತಾರಿಂಟಿಕಿ ದಾರೇದಿ ಸಿನಿಮಾದ ನಂತರ ಅವರು ಚಿತ್ರರಂಗವನ್ನು ಸಂಪೂರ್ಣವಾಗಿ ಬಿಟ್ಟರು.
ನಂತರದ ಬದುಕಿನಲ್ಲಿ ಮುಮ್ತಾಜ್ ಪೂಜೆ ಮತ್ತು ಆಧ್ಯಾತ್ಮದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಈಗಾಗಲೇ ಮೂರು ಬಾರಿ ಮೆಕ್ಕಾಗೆ ಭೇಟಿ ನೀಡಿದ್ದು, ಈ ಪವಿತ್ರ ಸ್ಥಳಕ್ಕೆ ಭೇಟಿ ನೀಡಿದ ಮುಸ್ಲಿಮರು ಧನ್ಯರು ಎಂಬ ನಂಬಿಕೆಯನ್ನು ಒಪ್ಪಿಕೊಂಡಿದ್ದಾರೆ.
ಆಧ್ಯಾತ್ಮದ ಬಗ್ಗೆ ಮಾತನಾಡಿದ ಅವರು, “ನಾನು ಬಾಲ್ಯದಲ್ಲಿ ಧಾರ್ಮಿಕ ಪುಸ್ತಕ ಕುರಾನ್ ಓದಿದರೂ, ಅದರ ಅರ್ಥ ತಿಳಿದಿರಲಿಲ್ಲ. ಈಗ ನಾನು ಬದಲಾಗಿದ್ದೇನೆ. ಕುರಾನ್ನ ಅರ್ಥವನ್ನು ಅರ್ಥಮಾಡಿಕೊಂಡು, ಅಲ್ಲಾಹನಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದೇನೆ. ನನ್ನ ಹಳೆಯ ಜೀವನವನ್ನು ಬದಲಾಯಿಸಲು ಸಾಧ್ಯವಿಲ್ಲ, ಆದರೆ ನನ್ನ ಹೊಸ ಜೀವನವನ್ನು ಶ್ರದ್ಧೆಯಿಂದ ನಡೆಸಲು ಪ್ರಯತ್ನಿಸುತ್ತಿದ್ದೇನೆ,” ಎಂದು ತಿಳಿಸಿದ್ದಾರೆ.
ಅವರು ತಮ್ಮ ಅಂತಿಮ ವಿನಂತಿಯನ್ನು ಹಂಚಿಕೊಳ್ಳುತ್ತಾ, “ನಾನು ಸತ್ತ ನಂತರ ನನ್ನ ಮಾದಕ ಫೋಟೋಗಳನ್ನು ಹಂಚದಿರಲು ನಿಮ್ಮೆಲ್ಲರ ಬಳಿ ಕೋರಿದ್ದೇನೆ. ದಯವಿಟ್ಟು ಇದನ್ನು ನನ್ನ ಕೊನೆಯ ಆಸೆಯಾಗಿ ಗಮನಿಸಿ. ಅವುಗಳನ್ನು ಹಂಚುವುದರಿಂದ ನನ್ನ ಆತ್ಮಕ್ಕೆ ನೋವು ಉಂಟಾಗುತ್ತದೆ,” ಎಂದು ಮನವಿ ಮಾಡಿದ್ದಾರೆ.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…