Cinema

ನನ್ನ ಮಾದಕ ಫೋಟೋಗಳನ್ನು ಹಂಚಿಕೊಳ್ಳಬೇಡಿ, ಕುರಾನ್‌ ಈಗ ನನಗೆ ಅರ್ಥವಾಗಿದೆ: ನಟಿ ಮುಮ್ತಾಜ್

ನಟಿ ಮುಮ್ತಾಜ್ ತಮಿಳು ಚಿತ್ರರಂಗದಲ್ಲಿ ಪ್ರಮುಖ ಸ್ಥಾನ ಪಡೆದ ನಟಿಯರಲ್ಲಿ ಒಬ್ಬರು. ಅವರು ಅನೇಕ ಚಿತ್ರಗಳಲ್ಲಿ ವಿಶೇಷ ಹಾಡುಗಳಲ್ಲಿ ಕಾಣಿಸಿಕೊಂಡಿದ್ದು, ಹೆಚ್ಚಾಗಿ ಗ್ಲಾಮರ್‌ ಪಾತ್ರಗಳಲ್ಲಿ ಪ್ರಭಾವ ಬೀರಿದ್ದಾರೆ. ಇದೀಗ ಅವರ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ.

ಕನ್ನಡದ ಕಂಠಿ ಸಿನಿಮಾದ ಐಟಂ ಸಾಂಗ್‌ನಲ್ಲಿ ಮಿಂಚಿದ್ದ ಮುಮ್ತಾಜ್‌ ಮುಖ್ಯವಾಗಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಹಳೆಯ ಸಂದರ್ಶನವೊಂದರಲ್ಲಿ, ಅವರು ತಮ್ಮ ಮರಣದ ನಂತರ ತಮ್ಮ ಮಾದಕ ಫೋಟೋಗಳನ್ನು ಹಂಚದಿರಲು ವಿನಂತಿಸಿಕೊಂಡಿದ್ದರು. ಈ ಮಾತುಗಳು ಈಗ ಮತ್ತೆ ಚರ್ಚೆಗೆ ಗ್ರಾಸವಾಗಿವೆ.

ಮುಂಬೈ ಮೂಲದ ಮುಮ್ತಾಜ್ ತಮಿಳು ಚಿತ್ರರಂಗಕ್ಕೆ ರಾಜೇಂದ್ರನ್ ನಿರ್ದೇಶಿಸಿದ ಮೋನಿಶಾ ಎನ್ ಮೊನಾಲಿಸಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. “ಮುಮ್ತಾಜ್ ಅಂದರೆ ಗ್ಲಾಮರ್, ಗ್ಲಾಮರ್ ಅಂದರೆ ಮುಮ್ತಾಜ್” ಎನ್ನುವ ಮಾತು ಪ್ರಚಲಿತವಾಗಿತ್ತು. ಆದರೆ 2013ರಲ್ಲಿ ತೆರೆಕಂಡ ಅತ್ತಾರಿಂಟಿಕಿ ದಾರೇದಿ ಸಿನಿಮಾದ ನಂತರ ಅವರು ಚಿತ್ರರಂಗವನ್ನು ಸಂಪೂರ್ಣವಾಗಿ ಬಿಟ್ಟರು.

ನಂತರದ ಬದುಕಿನಲ್ಲಿ ಮುಮ್ತಾಜ್‌ ಪೂಜೆ ಮತ್ತು ಆಧ್ಯಾತ್ಮದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಈಗಾಗಲೇ ಮೂರು ಬಾರಿ ಮೆಕ್ಕಾಗೆ ಭೇಟಿ ನೀಡಿದ್ದು, ಈ ಪವಿತ್ರ ಸ್ಥಳಕ್ಕೆ ಭೇಟಿ ನೀಡಿದ ಮುಸ್ಲಿಮರು ಧನ್ಯರು ಎಂಬ ನಂಬಿಕೆಯನ್ನು ಒಪ್ಪಿಕೊಂಡಿದ್ದಾರೆ.

ಆಧ್ಯಾತ್ಮದ ಬಗ್ಗೆ ಮಾತನಾಡಿದ ಅವರು, “ನಾನು ಬಾಲ್ಯದಲ್ಲಿ ಧಾರ್ಮಿಕ ಪುಸ್ತಕ ಕುರಾನ್‌ ಓದಿದರೂ, ಅದರ ಅರ್ಥ ತಿಳಿದಿರಲಿಲ್ಲ. ಈಗ ನಾನು ಬದಲಾಗಿದ್ದೇನೆ. ಕುರಾನ್‌ನ ಅರ್ಥವನ್ನು ಅರ್ಥಮಾಡಿಕೊಂಡು, ಅಲ್ಲಾಹನಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದೇನೆ. ನನ್ನ ಹಳೆಯ ಜೀವನವನ್ನು ಬದಲಾಯಿಸಲು ಸಾಧ್ಯವಿಲ್ಲ, ಆದರೆ ನನ್ನ ಹೊಸ ಜೀವನವನ್ನು ಶ್ರದ್ಧೆಯಿಂದ ನಡೆಸಲು ಪ್ರಯತ್ನಿಸುತ್ತಿದ್ದೇನೆ,” ಎಂದು ತಿಳಿಸಿದ್ದಾರೆ.

ಅವರು ತಮ್ಮ ಅಂತಿಮ ವಿನಂತಿಯನ್ನು ಹಂಚಿಕೊಳ್ಳುತ್ತಾ, “ನಾನು ಸತ್ತ ನಂತರ ನನ್ನ ಮಾದಕ ಫೋಟೋಗಳನ್ನು ಹಂಚದಿರಲು ನಿಮ್ಮೆಲ್ಲರ ಬಳಿ ಕೋರಿದ್ದೇನೆ. ದಯವಿಟ್ಟು ಇದನ್ನು ನನ್ನ ಕೊನೆಯ ಆಸೆಯಾಗಿ ಗಮನಿಸಿ. ಅವುಗಳನ್ನು ಹಂಚುವುದರಿಂದ ನನ್ನ ಆತ್ಮಕ್ಕೆ ನೋವು ಉಂಟಾಗುತ್ತದೆ,” ಎಂದು ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago