ರಾಜಧಾನಿ ಬೆಂಗಳೂರಿನ ಪೀಣ್ಯಾ ಎಚ್ಎಂಟಿ ಲೇಔಟ್ನಲ್ಲಿ ಅಪ್ರಾಪ್ತ ಬಾಲಕನಿಂದ ನಡೆದ ಡಬಲ್ ಮರ್ಡರ್ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದೆ. ಅಕ್ರಮ ಸಂಬಂಧದ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೇ ಈ ದುರ್ಘಟನೆಗೆ ಕಾರಣವಾಗಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಮಲ್ಲೇಗೌಡ ಎಂಬಾತನೊಂದಿಗೆ ಛಾಯಾ ಎಂಬ ಮಹಿಳೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಪ್ರಶ್ನಿಸಲು ಮಲ್ಲೇಗೌಡನ ಪತ್ನಿ ನಯನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಛಾಯಾ ಮನೆಗೆ ತೆರಳಿದ್ದರು.
ಈ ವೇಳೆ ಮನೆಯಲ್ಲಿ ಛಾಯಾ ಮಗನೊಂದಿಗೆ ನಯನಾ ಮತ್ತು ಸುದೀಪ್ ನಡುವೆ ವಾಗ್ವಾದ ಉಂಟಾಗಿದೆ. ಗಲಾಟೆ ತೀವ್ರಗೊಂಡಾಗ, ತಾಯಿಯನ್ನು ನಿಂದಿಸಿದ್ದಕ್ಕೆ ಆಕ್ರೋಶಗೊಂಡ ಅಪ್ರಾಪ್ತ ಬಾಲಕ ಮಚ್ಚಿನಿಂದ ಹಲ್ಲೆ ನಡೆಸಿ ಇಬ್ಬರನ್ನೂ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಸಿಪಿ ನಾಗೇಶ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆ ಅಪ್ರಾಪ್ತ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ಹೆಚ್ಚುತ್ತಿರುವುದಕ್ಕೆ ಆತಂಕಕಾರಿ ಉದಾಹರಣೆಯಾಗಿದೆ. ಪುಸ್ತಕ ಹಿಡಿಯಬೇಕಾದ ವಯಸ್ಸಿನಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಸಮಾಜದ ದಿಕ್ಕಿನ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…