ಪತ್ನಿಯ ಶೀಲದ ಕುರಿತು ಅನುಮಾನ ವ್ಯಕ್ತಪಡಿಸಿ ಗಂಡನು ಮಚ್ಚಿನಿಂದ ಕುತ್ತಿಗೆ ಸೀಳಿ ಹತ್ಯೆ ಮಾಡಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.
26 ವರ್ಷದ ತೇಜಸ್ವಿನಿಯನ್ನು ಆಕೆಯ ಗಂಡ ದೇವರಾಜು ಹತ್ಯೆ ಮಾಡಿದ್ದು, ಈ ದಂಪತಿಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ನಂತರ ಇಬ್ಬರು ಮಕ್ಕಳು ಇದ್ದರು.
ತೋಟದ ಮನೆಯಲ್ಲಿ ವಾಸಿಸುತ್ತಿದ್ದ ಈ ದಂಪತಿಯ ನಡುವೆ ಸಾಕಷ್ಟು ಕಾಲದಿಂದ ಜಗಳ ನಡೆಯುತ್ತಿತ್ತು. ಪತ್ನಿಯ ಮೇಲೆ ಸದಾ ಅನುಮಾನ ಹೊಂದಿದ್ದ ದೇವರಾಜು, ರಾತ್ರಿ ಅವಳ ಮೇಲೆ ಮಚ್ಚಿನಿಂದ ದಾಳಿ ಮಾಡಿ ಹತ್ಯೆ ನಡೆಸಿದ್ದಾನೆ.
ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಪೊಲೀಸರು ದೇವರಾಜು ಅವರನ್ನು ಬಂಧಿಸಿದ್ದಾರೆ.
ಮೈಸೂರು ಜಿಲ್ಲಾ ಎಸ್ಪಿ ವಿಷ್ಣುವರ್ಧನ್, ಅಡಿಷನಲ್ ಎಸ್ಪಿ ಮಲ್ಲಿಕ್, ಡಿವೈಎಸ್ಪಿ ಗೋಪಾಲಕೃಷ್ಣ, ಮತ್ತು ಸಿಪಿಐ ಶಬ್ಬೀರ್ ಹುಸೇನ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…