ಪತ್ನಿಯ ಶೀಲದ ಕುರಿತು ಅನುಮಾನ ವ್ಯಕ್ತಪಡಿಸಿ ಗಂಡನು ಮಚ್ಚಿನಿಂದ ಕುತ್ತಿಗೆ ಸೀಳಿ ಹತ್ಯೆ ಮಾಡಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.
26 ವರ್ಷದ ತೇಜಸ್ವಿನಿಯನ್ನು ಆಕೆಯ ಗಂಡ ದೇವರಾಜು ಹತ್ಯೆ ಮಾಡಿದ್ದು, ಈ ದಂಪತಿಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ನಂತರ ಇಬ್ಬರು ಮಕ್ಕಳು ಇದ್ದರು.
ತೋಟದ ಮನೆಯಲ್ಲಿ ವಾಸಿಸುತ್ತಿದ್ದ ಈ ದಂಪತಿಯ ನಡುವೆ ಸಾಕಷ್ಟು ಕಾಲದಿಂದ ಜಗಳ ನಡೆಯುತ್ತಿತ್ತು. ಪತ್ನಿಯ ಮೇಲೆ ಸದಾ ಅನುಮಾನ ಹೊಂದಿದ್ದ ದೇವರಾಜು, ರಾತ್ರಿ ಅವಳ ಮೇಲೆ ಮಚ್ಚಿನಿಂದ ದಾಳಿ ಮಾಡಿ ಹತ್ಯೆ ನಡೆಸಿದ್ದಾನೆ.
ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಪೊಲೀಸರು ದೇವರಾಜು ಅವರನ್ನು ಬಂಧಿಸಿದ್ದಾರೆ.
ಮೈಸೂರು ಜಿಲ್ಲಾ ಎಸ್ಪಿ ವಿಷ್ಣುವರ್ಧನ್, ಅಡಿಷನಲ್ ಎಸ್ಪಿ ಮಲ್ಲಿಕ್, ಡಿವೈಎಸ್ಪಿ ಗೋಪಾಲಕೃಷ್ಣ, ಮತ್ತು ಸಿಪಿಐ ಶಬ್ಬೀರ್ ಹುಸೇನ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…