ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಗಂಡನ ಕ್ರೌರ್ಯದ ಪರಮಾವಧಿ ಇದು ಎಂದು ಹೇಳಲಾಗಿದೆ.
ಬೆಸ್ಕಾಂ ಉದ್ಯೋಗಿಯಾಗಿರುವ ಕೃಷ್ಣಮೂರ್ತಿ ಎಂಬಾತನೇ ತನ್ನ ಪತ್ನಿ ಶ್ರುತಿ (೨೯)ಯನ್ನು ಕೊಲೆ ಮಾಡಿ ಪರಾರಿಯಾದ ದುಷ್ಟ ಗಂಡ. ಇವರಿಗೆ ಹಲವು ವರ್ಷಗಳ ಹಿಂದೆ ಮದುವೆಯಾಗಿತ್ತು. ಹಿಂದಿನಿಂದಲೂ ಹಣಕ್ಕಾಗಿ ಕಿರುಕುಳ ನಡೆಯುತ್ತಿತ್ತು. ಆದರೆ ಇತ್ತೀಚೆಗೆ ಅದು ವಿಪರೀತಕ್ಕೇರಿ ಹಲ್ಲೆ, ದೌರ್ಜನ್ಯ ಮಿತಿ ಮೀರಿತ್ತು ಎನ್ನಲಾಗಿದೆ.
ಈ ನಡುವೆ ಮಾತಿಗೆ ಮಾತು ಬೆಳೆದಾಗ ಈ ದುಷ್ಟ ಮಾರಕಾಸ್ತ್ರಗಳಿಂದ ಹೆಂಡತಿಗೆ ಬಡಿದಿದ್ದಾನೆ ಮತ್ತು ಆಕೆಗೆ ತೀವ್ರ ಗಾಯವಾಗಿರುವುದನ್ನು ಗಮನಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ನಡುವೆ ಗಾಯಗೊಂಡ ಶ್ರುತಿ ಅಲ್ಲೇ ಪ್ರಾಣ ಕಳೆದುಕೊಂಡಿದ್ದಾಳೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…