Latest

ಪತ್ನಿಗೆ ವರದಕ್ಷಿಣೆ ಕಿರುಕುಳ,: ಸಬ್‌ ಇನ್ಸ್‌ಪೆಕ್ಟರ್‌ ವಿರುದ್ಧ FIR

ಧರ್ಮಸ್ಥಳ ಸಬ್‌ ಇನ್ಸ್‌ಪೆಕ್ಟರ್‌ ಕಿಶೋರ್‌ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ತಮ್ಮ ವರ್ಗಾವಣೆಗೆ ಪತ್ನಿಯ ಪೋಷಕರಿಂದ 10 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದನ್ನೂ, ಹಣ ನೀಡದ ಹಿನ್ನೆಲೆಯಲ್ಲಿ ಪತ್ನಿಗೆ ಮಾನಸಿಕ ಮತ್ತು ಶಾರೀರಿಕ ಹಿಂಸೆಗೆ ಒಳಪಡಿಸಿದ್ದನ್ನೂ ಆರೋಪಿಸಲಾಗಿದೆ.

ಮದುವೆಯಿಂದಲೇ ಕಿರುಕುಳ

2024ರಲ್ಲಿ ಮೂಡಿಗೆರೆ ಸಬ್‌ ಇನ್ಸ್‌ಪೆಕ್ಟರ್‌ ಆಗಿದ್ದ ಕಿಶೋರ್‌, ವರ್ಷಳನ್ನು ವಿವಾಹವಾಗಿದ್ದರು. ಮದುವೆಯ ವೇಳೆ ವರ್ಷಳ ಪೋಷಕರು 10 ಲಕ್ಷ ನಗದು, 22 ಲಕ್ಷ ರೂಪಾಯಿ ಮೌಲ್ಯದ ಕ್ರೇಟಾ ಕಾರು, 135 ಗ್ರಾಂ ಚಿನ್ನ ಒದಗಿಸಿದ್ದರು. ಹಾಗೆಯೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅದ್ದೂರಿ ಮದುವೆ ನಡೆಸಿದ್ದರು. ಮದುವೆಯ ಬಳಿಕವೂ ವರ್ಷಳಿಗೆ ನಿರಂತರವಾಗಿ ವರದಕ್ಷಿಣೆ ಸಂಬಂಧ ಕಿರುಕುಳ ಮುಂದುವರಿದಿತ್ತು.

ವರ್ಗಾವಣೆಗೆ ಹಣ ಬೇಡಿಕೆ

ಮೂಡಿಗೆರೆಯಿಂದ ವರ್ಗಾವಣೆ ಪಡೆಯಲು ವರ್ಷಳ ಪೋಷಕರಿಂದ 10 ಲಕ್ಷ ರೂಪಾಯಿ ತರುವಂತೆ ಕಿಶೋರ್‌ ಒತ್ತಾಯಿಸಿದ್ದ. ಹಣ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದನೆ, ಕುಟುಂಬದವರ ಸಹಯೋಗದೊಂದಿಗೆ ಹಲ್ಲೆ ನಡೆಸಿರುವುದಾಗಿ ವರ್ಷ ಪೊಲೀಸ್‌ ದೂರು ದಾಖಲಿಸಿದ್ದಾರೆ.

ಗಂಭೀರ ಹಲ್ಲೆ, ಆಸ್ಪತ್ರೆಗೆ ದಾಖಲು

ಹಲ್ಲೆ ಹಿನ್ನಲೆಯಲ್ಲಿ ಗಂಭೀರ ಗಾಯಗೊಂಡ ವರ್ಷಳನ್ನು ಮೊದಲು ಧರ್ಮಸ್ಥಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಘಟನೆಯ ಬಗ್ಗೆ ವರ್ಷ ಚಂದ್ರಲೇಔಟ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಕಿಶೋರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ಪ್ರಕರಣ ಇದೀಗ ಸುದ್ದಿಯ ಕೇಂದ್ರ ಬಿಂದುವಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

27 minutes ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

13 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

15 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago