ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಚಿತ್ರರಂಗದ ಹಿರಿಯ ನಟ ಸುಂದರ್ ರಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 18 ಜೊತೆ ಮಾತನಾಡಿದ ಸುಂದರ್ ರಾಜ್, ಡಾ. ರಾಜ್ಕುಮಾರ್ ಅವರಿಗೆ ಸರಿಸಾಟಿಯಾದ ಕಲಾವಿದ ಈ ಜಗತ್ತಿನಲ್ಲಿ ಇಲ್ಲ ಎಂದು ಅಭಿಪ್ರಾಯಪಟ್ಟರು. ‘ನಟ ಸಾರ್ವಭೌಮ’ ಎಂಬ ಬಿರುದನ್ನು ಪಡೆದಿದ್ದ ಅಣ್ಣಾವ್ರನ್ನು ರಾಜಕೀಯಕ್ಕೆ ಬರಲು ಹಲವು ಬಾರಿ ಆಹ್ವಾನಿಸಲಾಯಿತಾದರೂ, ಅವರು “ನಾನು ಕಲಾವಿದನಾಗಿಯೇ ಉಳಿಯುತ್ತೇನೆ” ಎಂದು ಹೇಳಿ ಕನ್ನಡಿಗರ ಹೃದಯದಲ್ಲಿ ಧ್ರುವತಾರೆಯಾಗಿ ಉಳಿದಿದ್ದಾರೆ ಎಂದರು.
ಡಾ. ರಾಜ್ಕುಮಾರ್ ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿದ ಮಹಾನ್ ವ್ಯಕ್ತಿ. ಅವರಿಗೆ ಕರ್ನಾಟಕದಲ್ಲಿ ಎಲ್ಲಿಯಾದರೂ ಭೂಮಿ ನೀಡಬಹುದು. ಎರಡು ಎಕರೆಯಲ್ಲ, ಸಾವಿರಾರು ಎಕರೆ ಭೂಮಿ ಕೊಟ್ಟರೂ ತಪ್ಪಿಲ್ಲ. ಅವರಿಗಾಗಿ ಭೂಮಿ ಯಾಕೆ ಕೊಡಬೇಕು ಎಂದು ಪ್ರಶ್ನಿಸುವ ಅಗತ್ಯವೇ ಇಲ್ಲ ಎಂದು ಸುಂದರ್ ರಾಜ್ ಹೇಳಿದ್ದಾರೆ.
ಈ ನಡುವೆ, ವಾಣಿಜ್ಯ ಮಂಡಳಿ ಸೋಮವಾರ ಸಭೆ ನಡೆಸಿ ನಟ ಚೇತನ್ ಅವರಿಗೆ ನೋಟಿಸ್ ನೀಡುವ ಕುರಿತು ಚರ್ಚಿಸಲಿದೆ ಎಂದು ತಿಳಿದುಬಂದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೂಡ ಸೂಚನೆ ನೀಡಲಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಚೇತನ್ ಅಹಿಂಸಾ, ತಮ್ಮ ಹೇಳಿಕೆ ಡಾ. ರಾಜ್ಕುಮಾರ್ ಅವರ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಅಮೇರಿಕಾದಲ್ಲಿದ್ದಾಗಲೂ ಅವರ ಸಿನಿಮಾಗಳನ್ನು ನೋಡಿದ್ದೇನೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ” ಎಂದಿದ್ದಾರೆ.
ಆದರೆ, ಸರ್ಕಾರ ಅವರ ಹೆಸರಿನಲ್ಲಿ ಭೂಮಿ ನೀಡಿರುವ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದೇನೆ ಅಷ್ಟೇ ಎಂದು ಅವರು ತಿಳಿಸಿದ್ದಾರೆ. “ಚಿತ್ರರಂಗದಲ್ಲಿ ಪುಟ್ಟಣ್ಣ ಕಣಗಾಲ್, ನಂಜುಂಡಸ್ವಾಮಿ, ಬಿ. ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರಿಗೆ ಈ ರೀತಿಯ ಗೌರವ ಯಾಕಿಲ್ಲ?” ಎಂದು ಪ್ರಶ್ನಿಸಿದ್ದಾರೆ.
ಡಾ. ರಾಜ್ಕುಮಾರ್ ಅವರ ಸ್ಮಾರಕವನ್ನು ಗಾಜನೂರಿನಲ್ಲಿ ನಿರ್ಮಿಸಬಹುದಿತ್ತು, ಆದರೆ ನಗರ ಮಧ್ಯಭಾಗದಲ್ಲಿ ನಿರ್ಮಿಸಿರುವುದು ಸರ್ಕಾರದ ನಿರ್ಧಾರ. ಸಿಟಿ ಸೆಂಟರ್ನಲ್ಲಿ ಭೂಮಿ ನೀಡುವ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ಅವರು ಹೇಳಿದ್ದಾರೆ.
“ನಾನು ಯಾರನ್ನೂ ಅವಮಾನಿಸುವ ಉದ್ದೇಶ ಹೊಂದಿಲ್ಲ. ಆದರೆ ಸರ್ಕಾರವು ಈ ರೀತಿಯ ನಿರ್ಧಾರಗಳಿಂದ ಲಾಭ ಪಡೆಯುತ್ತಿದೆಯೇ ಎಂಬ ಪ್ರಶ್ನೆ ಎತ್ತುತ್ತಿದ್ದೇನೆ. ರಾಜ್ಯಕ್ಕೆ ಹಲವರು ಕೊಡುಗೆ ನೀಡಿದ್ದಾರೆ. ಎಲ್ಲರಿಗೂ ಸಮಾನ ಗೌರವ ಸಿಗಬೇಕು” ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ.
ಈ ವಿಚಾರ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲೂ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…