Categories: CinemaLatest

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಚಿತ್ರರಂಗದ ಹಿರಿಯ ನಟ ಸುಂದರ್ ರಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯೂಸ್ 18 ಜೊತೆ ಮಾತನಾಡಿದ ಸುಂದರ್ ರಾಜ್, ಡಾ. ರಾಜ್‌ಕುಮಾರ್ ಅವರಿಗೆ ಸರಿಸಾಟಿಯಾದ ಕಲಾವಿದ ಈ ಜಗತ್ತಿನಲ್ಲಿ ಇಲ್ಲ ಎಂದು ಅಭಿಪ್ರಾಯಪಟ್ಟರು. ‘ನಟ ಸಾರ್ವಭೌಮ’ ಎಂಬ ಬಿರುದನ್ನು ಪಡೆದಿದ್ದ ಅಣ್ಣಾವ್ರನ್ನು ರಾಜಕೀಯಕ್ಕೆ ಬರಲು ಹಲವು ಬಾರಿ ಆಹ್ವಾನಿಸಲಾಯಿತಾದರೂ, ಅವರು “ನಾನು ಕಲಾವಿದನಾಗಿಯೇ ಉಳಿಯುತ್ತೇನೆ” ಎಂದು ಹೇಳಿ ಕನ್ನಡಿಗರ ಹೃದಯದಲ್ಲಿ ಧ್ರುವತಾರೆಯಾಗಿ ಉಳಿದಿದ್ದಾರೆ ಎಂದರು.

ಡಾ. ರಾಜ್‌ಕುಮಾರ್ ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿದ ಮಹಾನ್ ವ್ಯಕ್ತಿ. ಅವರಿಗೆ ಕರ್ನಾಟಕದಲ್ಲಿ ಎಲ್ಲಿಯಾದರೂ ಭೂಮಿ ನೀಡಬಹುದು. ಎರಡು ಎಕರೆಯಲ್ಲ, ಸಾವಿರಾರು ಎಕರೆ ಭೂಮಿ ಕೊಟ್ಟರೂ ತಪ್ಪಿಲ್ಲ. ಅವರಿಗಾಗಿ ಭೂಮಿ ಯಾಕೆ ಕೊಡಬೇಕು ಎಂದು ಪ್ರಶ್ನಿಸುವ ಅಗತ್ಯವೇ ಇಲ್ಲ ಎಂದು ಸುಂದರ್ ರಾಜ್ ಹೇಳಿದ್ದಾರೆ.

ಈ ನಡುವೆ, ವಾಣಿಜ್ಯ ಮಂಡಳಿ ಸೋಮವಾರ ಸಭೆ ನಡೆಸಿ ನಟ ಚೇತನ್ ಅವರಿಗೆ ನೋಟಿಸ್ ನೀಡುವ ಕುರಿತು ಚರ್ಚಿಸಲಿದೆ ಎಂದು ತಿಳಿದುಬಂದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೂಡ ಸೂಚನೆ ನೀಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಚೇತನ್ ಅಹಿಂಸಾ, ತಮ್ಮ ಹೇಳಿಕೆ ಡಾ. ರಾಜ್‌ಕುಮಾರ್ ಅವರ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಅಮೇರಿಕಾದಲ್ಲಿದ್ದಾಗಲೂ ಅವರ ಸಿನಿಮಾಗಳನ್ನು ನೋಡಿದ್ದೇನೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ” ಎಂದಿದ್ದಾರೆ.

ಆದರೆ, ಸರ್ಕಾರ ಅವರ ಹೆಸರಿನಲ್ಲಿ ಭೂಮಿ ನೀಡಿರುವ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದೇನೆ ಅಷ್ಟೇ ಎಂದು ಅವರು ತಿಳಿಸಿದ್ದಾರೆ. “ಚಿತ್ರರಂಗದಲ್ಲಿ ಪುಟ್ಟಣ್ಣ ಕಣಗಾಲ್, ನಂಜುಂಡಸ್ವಾಮಿ, ಬಿ. ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರಿಗೆ ಈ ರೀತಿಯ ಗೌರವ ಯಾಕಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಡಾ. ರಾಜ್‌ಕುಮಾರ್ ಅವರ ಸ್ಮಾರಕವನ್ನು ಗಾಜನೂರಿನಲ್ಲಿ ನಿರ್ಮಿಸಬಹುದಿತ್ತು, ಆದರೆ ನಗರ ಮಧ್ಯಭಾಗದಲ್ಲಿ ನಿರ್ಮಿಸಿರುವುದು ಸರ್ಕಾರದ ನಿರ್ಧಾರ. ಸಿಟಿ ಸೆಂಟರ್‌ನಲ್ಲಿ ಭೂಮಿ ನೀಡುವ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ಅವರು ಹೇಳಿದ್ದಾರೆ.

“ನಾನು ಯಾರನ್ನೂ ಅವಮಾನಿಸುವ ಉದ್ದೇಶ ಹೊಂದಿಲ್ಲ. ಆದರೆ ಸರ್ಕಾರವು ಈ ರೀತಿಯ ನಿರ್ಧಾರಗಳಿಂದ ಲಾಭ ಪಡೆಯುತ್ತಿದೆಯೇ ಎಂಬ ಪ್ರಶ್ನೆ ಎತ್ತುತ್ತಿದ್ದೇನೆ. ರಾಜ್ಯಕ್ಕೆ ಹಲವರು ಕೊಡುಗೆ ನೀಡಿದ್ದಾರೆ. ಎಲ್ಲರಿಗೂ ಸಮಾನ ಗೌರವ ಸಿಗಬೇಕು” ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ.

ಈ ವಿಚಾರ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲೂ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಭ್ರಷ್ಟರ ಬೇಟೆ

Recent Posts

ರಾಂಪೂರ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಬದಲಾವಣೆಗೆ ವಿದ್ಯಾರ್ಥಿಗಳ ಪಟ್ಟು

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಂಪೂರ (ಆರ್.ಸಿ) ಗ್ರಾಮದಲ್ಲಿ ಇಂದು ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕರ…

9 hours ago

ಫೇಕ್ ಅಟ್ರಾಸಿಟಿ ಕೇಸ್ ಆರೋಪ: ಮನನೊಂದು ವಿಷ ಸೇವಿಸಿದ ವ್ಯಾಪಾರಿ ಸಾವು, ಹಲವು ಮಂದಿ ಪೊಲೀಸರ ವಶಕ್ಕೆ

ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪದ ಚನ್ನಸಂದ್ರದ ಎಕೆಜಿ ಕಾಲೋನಿಯಲ್ಲಿ ಫೇಕ್ ಅಟ್ರಾಸಿಟಿ ಕೇಸ್‌ನಿಂದ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ…

13 hours ago

ತಾಯಿ-ಮಗಳು ಪ್ರೇಮಕಥೆಯ ಶಾಕ್ ಟ್ವಿಸ್ಟ್: ಒಂದೇ ಕುಟುಂಬದಲ್ಲಿ ಬಯಲಾದ ಅಕ್ರಮ ಸಂಬಂಧದ ಜಾಲ, ತಾಯಿ ಸಾವಿನಲ್ಲಿ ಅಂತ್ಯ!

ಜೈಪುರದ ಅರಂಗೇರಿ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆ ಕುಟುಂಬದೊಳಗಿನ ಅಕ್ರಮ ಸಂಬಂಧಗಳ ಜಾಲವನ್ನು ಬಹಿರಂಗಪಡಿಸಿದ್ದು, ಕೊನೆಗೆ ಮಹಿಳೆಯೊಬ್ಬಳ ಸಾವಿನಲ್ಲಿ ಅಂತ್ಯಗೊಂಡಿದೆ.…

13 hours ago

ಬೈಕ್ ಪಾರ್ಕಿಂಗ್ ಜಗಳಕ್ಕೆ ರಕ್ತರಂಜಿತ ಅಂತ್ಯ: ಮಹಿಳೆ ಹತ್ಯೆ, ಪತಿ ಗಂಭೀರ

ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ…

13 hours ago

ಪತ್ನಿಯೊಂದಿಗೆ ಸಂಬಂಧದ ಶಂಕೆ: ವ್ಯಕ್ತಿಯ ಹತ್ಯೆ, ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ…

13 hours ago

ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ

ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ…

14 hours ago