ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಚಿತ್ರರಂಗದ ಹಿರಿಯ ನಟ ಸುಂದರ್ ರಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 18 ಜೊತೆ ಮಾತನಾಡಿದ ಸುಂದರ್ ರಾಜ್, ಡಾ. ರಾಜ್ಕುಮಾರ್ ಅವರಿಗೆ ಸರಿಸಾಟಿಯಾದ ಕಲಾವಿದ ಈ ಜಗತ್ತಿನಲ್ಲಿ ಇಲ್ಲ ಎಂದು ಅಭಿಪ್ರಾಯಪಟ್ಟರು. ‘ನಟ ಸಾರ್ವಭೌಮ’ ಎಂಬ ಬಿರುದನ್ನು ಪಡೆದಿದ್ದ ಅಣ್ಣಾವ್ರನ್ನು ರಾಜಕೀಯಕ್ಕೆ ಬರಲು ಹಲವು ಬಾರಿ ಆಹ್ವಾನಿಸಲಾಯಿತಾದರೂ, ಅವರು “ನಾನು ಕಲಾವಿದನಾಗಿಯೇ ಉಳಿಯುತ್ತೇನೆ” ಎಂದು ಹೇಳಿ ಕನ್ನಡಿಗರ ಹೃದಯದಲ್ಲಿ ಧ್ರುವತಾರೆಯಾಗಿ ಉಳಿದಿದ್ದಾರೆ ಎಂದರು.
ಡಾ. ರಾಜ್ಕುಮಾರ್ ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿದ ಮಹಾನ್ ವ್ಯಕ್ತಿ. ಅವರಿಗೆ ಕರ್ನಾಟಕದಲ್ಲಿ ಎಲ್ಲಿಯಾದರೂ ಭೂಮಿ ನೀಡಬಹುದು. ಎರಡು ಎಕರೆಯಲ್ಲ, ಸಾವಿರಾರು ಎಕರೆ ಭೂಮಿ ಕೊಟ್ಟರೂ ತಪ್ಪಿಲ್ಲ. ಅವರಿಗಾಗಿ ಭೂಮಿ ಯಾಕೆ ಕೊಡಬೇಕು ಎಂದು ಪ್ರಶ್ನಿಸುವ ಅಗತ್ಯವೇ ಇಲ್ಲ ಎಂದು ಸುಂದರ್ ರಾಜ್ ಹೇಳಿದ್ದಾರೆ.
ಈ ನಡುವೆ, ವಾಣಿಜ್ಯ ಮಂಡಳಿ ಸೋಮವಾರ ಸಭೆ ನಡೆಸಿ ನಟ ಚೇತನ್ ಅವರಿಗೆ ನೋಟಿಸ್ ನೀಡುವ ಕುರಿತು ಚರ್ಚಿಸಲಿದೆ ಎಂದು ತಿಳಿದುಬಂದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೂಡ ಸೂಚನೆ ನೀಡಲಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಚೇತನ್ ಅಹಿಂಸಾ, ತಮ್ಮ ಹೇಳಿಕೆ ಡಾ. ರಾಜ್ಕುಮಾರ್ ಅವರ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಅಮೇರಿಕಾದಲ್ಲಿದ್ದಾಗಲೂ ಅವರ ಸಿನಿಮಾಗಳನ್ನು ನೋಡಿದ್ದೇನೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ” ಎಂದಿದ್ದಾರೆ.
ಆದರೆ, ಸರ್ಕಾರ ಅವರ ಹೆಸರಿನಲ್ಲಿ ಭೂಮಿ ನೀಡಿರುವ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದೇನೆ ಅಷ್ಟೇ ಎಂದು ಅವರು ತಿಳಿಸಿದ್ದಾರೆ. “ಚಿತ್ರರಂಗದಲ್ಲಿ ಪುಟ್ಟಣ್ಣ ಕಣಗಾಲ್, ನಂಜುಂಡಸ್ವಾಮಿ, ಬಿ. ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರಿಗೆ ಈ ರೀತಿಯ ಗೌರವ ಯಾಕಿಲ್ಲ?” ಎಂದು ಪ್ರಶ್ನಿಸಿದ್ದಾರೆ.
ಡಾ. ರಾಜ್ಕುಮಾರ್ ಅವರ ಸ್ಮಾರಕವನ್ನು ಗಾಜನೂರಿನಲ್ಲಿ ನಿರ್ಮಿಸಬಹುದಿತ್ತು, ಆದರೆ ನಗರ ಮಧ್ಯಭಾಗದಲ್ಲಿ ನಿರ್ಮಿಸಿರುವುದು ಸರ್ಕಾರದ ನಿರ್ಧಾರ. ಸಿಟಿ ಸೆಂಟರ್ನಲ್ಲಿ ಭೂಮಿ ನೀಡುವ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ಅವರು ಹೇಳಿದ್ದಾರೆ.
“ನಾನು ಯಾರನ್ನೂ ಅವಮಾನಿಸುವ ಉದ್ದೇಶ ಹೊಂದಿಲ್ಲ. ಆದರೆ ಸರ್ಕಾರವು ಈ ರೀತಿಯ ನಿರ್ಧಾರಗಳಿಂದ ಲಾಭ ಪಡೆಯುತ್ತಿದೆಯೇ ಎಂಬ ಪ್ರಶ್ನೆ ಎತ್ತುತ್ತಿದ್ದೇನೆ. ರಾಜ್ಯಕ್ಕೆ ಹಲವರು ಕೊಡುಗೆ ನೀಡಿದ್ದಾರೆ. ಎಲ್ಲರಿಗೂ ಸಮಾನ ಗೌರವ ಸಿಗಬೇಕು” ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ.
ಈ ವಿಚಾರ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲೂ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…
ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…