Crime

“ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ: ಲಂಚಕ್ಕೆ ಡಿಮ್ಯಾಂಡ್, ಠಾಣೆಯಲ್ಲಿ ಹಲ್ಲೆ – ಪೊಲೀಸರ ವಿರುದ್ಧ ಗಂಭೀರ ಆರೋಪ!”

ಡ್ರಿಂಕ್ ಅಂಡ್ ಡ್ರೈವ್ (Drink and Drive) ತಪಾಸಣೆ ವೇಳೆ ಪೊಲೀಸರು ಲಂಚಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂಬ ಗಂಭೀರ ಆರೋಪವೊಂದು ಮಾಡಲಾಗಿದೆ. ವಾಹನ ಸವಾರನೊಬ್ಬ, ಪೊಲೀಸ್ ಅಧಿಕಾರಿಗಳು ₹3 ಸಾವಿರ ಲಂಚಕ್ಕೆ ಒತ್ತಾಯಿಸಿದರು, ನಗದು ಕೊಡಲು ಸಾಧ್ಯವಿಲ್ಲ, ಗೂಗಲ್ ಪೇ ಮಾಡುತ್ತೇನೆ ಎಂದಾಗ ನಿರಾಕರಿಸಿದರು ಎಂದು ದೂರು ನೀಡಿದ್ದಾರೆ.

ಲಂಚದ ಬೇಡಿಕೆ ಆರೋಪ

ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುವುದು, ಅದನ್ನು ಕೋರ್ಟ್‌ನಲ್ಲಿ ಪಾವತಿಸಬೇಕು ಎಂಬ ನಿಯಮವಿದೆ. ಆದರೆ, ವಿಜಯನಗರ ಸಂಚಾರಿ ಠಾಣೆ ಪೊಲೀಸರು ನೇರವಾಗಿ ಹಣ ಕೇಳಿದರಂತೆ. ಈಶ್ವರ್ ಎಂಬ ಬೈಕ್ ಸವಾರನ ಪ್ರಕಾರ, ಮಾರ್ಚ್ 14ರ ರಾತ್ರಿ ಜಿಟಿ ಮಾಲ್ ಬಳಿ ಪೊಲೀಸರು ತಪಾಸಣೆ ಮಾಡುತ್ತಿದ್ದರು. ಆರ್‌ಎಕ್ಸ್ ಬೈಕ್‌ನಲ್ಲಿ ಮದ್ಯ ಸೇವಿಸಿ ಬರುತ್ತಿದ್ದ ಈಶ್ವರ್ ಅವರನ್ನು ತಡೆದು, “₹10 ಸಾವಿರ ದಂಡ ಆಗುತ್ತದೆ, ₹3 ಸಾವಿರ ನೀಡಿದರೆ ಬಿಟ್ಟುಕೊಡುತ್ತೇವೆ” ಎಂದು ತಿಳಿಸಿದ್ದರಂತೆ.

ಈಶ್ವರ್ ನಗದು ಇಲ್ಲವೆಂದು ಗೂಗಲ್ ಪೇ ಮಾಡಲು ಯತ್ನಿಸಿದಾಗ, ಪೊಲೀಸರು ಕೇವಲ ನಗದು ಬೇಕು ಎಂದು ಒತ್ತಾಯಿಸಿದ್ರಂತೆ. ಈಶ್ವರ್ ಕೋರ್ಟ್‌ನಲ್ಲಿ ಪೂರ್ಣ ದಂಡ ಪಾವತಿಸುತ್ತೇನೆ ಎಂದಾಗ, ಅವರ ಬೈಕ್ ಅನ್ನು ಠಾಣೆಗೆ ವಾಪಸು ತೆಗೆದುಕೊಂಡು ಹೋಗಿದ್ದಾರೆ.

ಠಾಣೆಯಲ್ಲಿ ಹಲ್ಲೆ ಆರೋಪ

ಮಾರ್ಚ್ 15ರಂದು ಕೋರ್ಟ್‌ನಲ್ಲಿ ₹13 ಸಾವಿರ ದಂಡ ಪಾವತಿಸಿದ ಈಶ್ವರ್, ಮಾರ್ಚ್ 16ರಂದು ತನ್ನ ಸ್ನೇಹಿತನೊಂದಿಗೆ ಬೈಕ್ ವಾಪಸು ಪಡೆಯಲು ವಿಜಯನಗರ ಸಂಚಾರಿ ಪೊಲೀಸ್ ಠಾಣೆಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ, ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿದ್ರಂತೆ.

ಆಸ್ಪತ್ರೆಯಿಂದ ವಿಡಿಯೋ ಮೂಲಕ ದೂರು
ಈಶ್ವರ್ ಹಲ್ಲೆಯ ಬಗ್ಗೆ ವಿಡಿಯೋ ಮಾಡಿದ್ದು, “ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೂಟ್ ನಿಂದ ಒದ್ದಿದ್ದಾರೆ. ಹಲ್ಲೆಯಿಂದ ನಾನು ಅಸ್ವಸ್ಥನಾಗಿದ್ದೆ, ಸ್ನೇಹಿತರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ” ಎಂದು ಹೇಳಿದ್ದಾರೆ.

ಪೊಲೀಸ್ ಇಲಾಖೆಯಿಂದ ತನಿಖೆ

ಈ ಪ್ರಕರಣ ಸಂಬಂಧ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನಿತಾ ಹದ್ದಣ್ಣನವರ್ ಅವರು ವರದಿ ಕೇಳಿದ್ದಾರೆ. ಎಸಿಪಿ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago