Crime

“ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ: ಲಂಚಕ್ಕೆ ಡಿಮ್ಯಾಂಡ್, ಠಾಣೆಯಲ್ಲಿ ಹಲ್ಲೆ – ಪೊಲೀಸರ ವಿರುದ್ಧ ಗಂಭೀರ ಆರೋಪ!”

ಡ್ರಿಂಕ್ ಅಂಡ್ ಡ್ರೈವ್ (Drink and Drive) ತಪಾಸಣೆ ವೇಳೆ ಪೊಲೀಸರು ಲಂಚಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂಬ ಗಂಭೀರ ಆರೋಪವೊಂದು ಮಾಡಲಾಗಿದೆ. ವಾಹನ ಸವಾರನೊಬ್ಬ, ಪೊಲೀಸ್ ಅಧಿಕಾರಿಗಳು ₹3 ಸಾವಿರ ಲಂಚಕ್ಕೆ ಒತ್ತಾಯಿಸಿದರು, ನಗದು ಕೊಡಲು ಸಾಧ್ಯವಿಲ್ಲ, ಗೂಗಲ್ ಪೇ ಮಾಡುತ್ತೇನೆ ಎಂದಾಗ ನಿರಾಕರಿಸಿದರು ಎಂದು ದೂರು ನೀಡಿದ್ದಾರೆ.

ಲಂಚದ ಬೇಡಿಕೆ ಆರೋಪ

ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುವುದು, ಅದನ್ನು ಕೋರ್ಟ್‌ನಲ್ಲಿ ಪಾವತಿಸಬೇಕು ಎಂಬ ನಿಯಮವಿದೆ. ಆದರೆ, ವಿಜಯನಗರ ಸಂಚಾರಿ ಠಾಣೆ ಪೊಲೀಸರು ನೇರವಾಗಿ ಹಣ ಕೇಳಿದರಂತೆ. ಈಶ್ವರ್ ಎಂಬ ಬೈಕ್ ಸವಾರನ ಪ್ರಕಾರ, ಮಾರ್ಚ್ 14ರ ರಾತ್ರಿ ಜಿಟಿ ಮಾಲ್ ಬಳಿ ಪೊಲೀಸರು ತಪಾಸಣೆ ಮಾಡುತ್ತಿದ್ದರು. ಆರ್‌ಎಕ್ಸ್ ಬೈಕ್‌ನಲ್ಲಿ ಮದ್ಯ ಸೇವಿಸಿ ಬರುತ್ತಿದ್ದ ಈಶ್ವರ್ ಅವರನ್ನು ತಡೆದು, “₹10 ಸಾವಿರ ದಂಡ ಆಗುತ್ತದೆ, ₹3 ಸಾವಿರ ನೀಡಿದರೆ ಬಿಟ್ಟುಕೊಡುತ್ತೇವೆ” ಎಂದು ತಿಳಿಸಿದ್ದರಂತೆ.

ಈಶ್ವರ್ ನಗದು ಇಲ್ಲವೆಂದು ಗೂಗಲ್ ಪೇ ಮಾಡಲು ಯತ್ನಿಸಿದಾಗ, ಪೊಲೀಸರು ಕೇವಲ ನಗದು ಬೇಕು ಎಂದು ಒತ್ತಾಯಿಸಿದ್ರಂತೆ. ಈಶ್ವರ್ ಕೋರ್ಟ್‌ನಲ್ಲಿ ಪೂರ್ಣ ದಂಡ ಪಾವತಿಸುತ್ತೇನೆ ಎಂದಾಗ, ಅವರ ಬೈಕ್ ಅನ್ನು ಠಾಣೆಗೆ ವಾಪಸು ತೆಗೆದುಕೊಂಡು ಹೋಗಿದ್ದಾರೆ.

ಠಾಣೆಯಲ್ಲಿ ಹಲ್ಲೆ ಆರೋಪ

ಮಾರ್ಚ್ 15ರಂದು ಕೋರ್ಟ್‌ನಲ್ಲಿ ₹13 ಸಾವಿರ ದಂಡ ಪಾವತಿಸಿದ ಈಶ್ವರ್, ಮಾರ್ಚ್ 16ರಂದು ತನ್ನ ಸ್ನೇಹಿತನೊಂದಿಗೆ ಬೈಕ್ ವಾಪಸು ಪಡೆಯಲು ವಿಜಯನಗರ ಸಂಚಾರಿ ಪೊಲೀಸ್ ಠಾಣೆಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ, ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿದ್ರಂತೆ.

ಆಸ್ಪತ್ರೆಯಿಂದ ವಿಡಿಯೋ ಮೂಲಕ ದೂರು
ಈಶ್ವರ್ ಹಲ್ಲೆಯ ಬಗ್ಗೆ ವಿಡಿಯೋ ಮಾಡಿದ್ದು, “ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೂಟ್ ನಿಂದ ಒದ್ದಿದ್ದಾರೆ. ಹಲ್ಲೆಯಿಂದ ನಾನು ಅಸ್ವಸ್ಥನಾಗಿದ್ದೆ, ಸ್ನೇಹಿತರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ” ಎಂದು ಹೇಳಿದ್ದಾರೆ.

ಪೊಲೀಸ್ ಇಲಾಖೆಯಿಂದ ತನಿಖೆ

ಈ ಪ್ರಕರಣ ಸಂಬಂಧ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನಿತಾ ಹದ್ದಣ್ಣನವರ್ ಅವರು ವರದಿ ಕೇಳಿದ್ದಾರೆ. ಎಸಿಪಿ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

10 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

10 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago